7 ಐಎಎಸ್ ಅಧಿಕಾರಿಗಳ ವರ್ಗಾಯಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶಿಸಿದೆ. ಸಿ. ಶಿಖಾ, ಅಜಯ್ ನಾಗಭೂಷಣ್, ಸಲ್ಮಾ ಫಾಹಿಮಾ, ಕಣಗವಲ್ಲಿ, ರಘುನಂದನ್ ಮೂರ್ತಿ, ಎಂ.ಎಸ್.ಅರ್ಚನಾ, ರಮ್ಯಾ ಸೇರಿ ಒಟ್ಟು 7 ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ.ಶಿಖಾ ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ, ಸಲ್ಮಾ ಫಾಹಿಮಾರನ್ನು ಬೆಂಗಳೂರು ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯಕ್ಕೆ ವರ್ಗಾವಣೆ ಮಾಡಲಾಗಿದೆ. ಕಣಗವಲ್ಲಿ ಪರೀಕ್ಷಾ ನಿಯಂತ್ರಕರು, ಕೆಪಿಎಸ್ ಸಿ, ರಘುನಂದನ್ ಮೂರ್ತಿ ಹೆಚ್ಚುವರಿ ಆಯುಕ್ತರು ವಾಣಿಜ್ಯ ತೆರಿಗೆ ಇಲಾಖೆ, ಎಂ.ಎಸ್. ಅರ್ಚನಾ – ಸದಸ್ಯರು, ಕೆಎಟಿ ಬೆಂಗಳುರು, ರಮ್ಯಾ ಎಸ್. ಕಾರ್ಯಕಾರಿ ನಿರ್ದೇಶಕರು, ಪರೀಕ್ಷಾ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

 
 
 
 
 
 
 
 
 
 
 

Leave a Reply