ಬೆಂಗಳೂರು : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ ಲಾಕ್ ಘೋಷಿಸಿದೆ.
ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, 16 ಜಿಲ್ಲೆಗಳಲ್ಲಿ ಶೇಕಡಾ 5 ರಷ್ಟು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ, ಆ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ಇದರೊಂದಿಗೆ ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಮುಖ್ಯ ಅಂಶಗಳು :
• ಸೋಮವಾರದಿಂದ ಮೆಟ್ರೋ ಸಂಚಾರ ಆರಂಭ
• ಮೆಟ್ರೋ ಗಳಲ್ಲಿ ಶೇಕಡಾ 50ರಷ್ಟು ಜನರ ಸಂಚಾರಕ್ಕೆ ಅವಕಾಶ
• ವಾರಾಂತ್ಯದ ಕರ್ಫ್ಯೂ ಮುಂದುವರಿಕೆ
• ಸೋಮವಾರದಿಂದ ರಾಜ್ಯಾದ್ಯಂತ ಜ್ಯುವೆಲ್ಲರಿ ಶಾಪ್ ಗಳನ್ನು ತೆರೆಯಲು ಅವಕಾಶ
• ಮಾಲ್ ಗಳು ತೆರೆಯಲು ಅವಕಾಶವಿಲ್ಲ
• ಸರ್ಕಾರಿ ಕಚೇರಿಗಳಲ್ಲಿ ಶೇಕಡಾ. 50 ರಷ್ಟು ಸಿಬ್ಬಂದಿಗಳಿಗೆ ಅವಕಾಶಸೋಮವಾರದಿಂದ ಹೋಟೇಲ್ ತೆರೆಯಲು ಅವಕಾಶ
• ಹೋಟೇಲ್ ಗಳಲ್ಲಿ ಶೇಕಡಾ 50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
• ಪಾಸಿಟಿವಿಟಿ ಆಧಾರದ ಮೇಲೆ ನಿರ್ಬಂಧ ಸಡಿಲಿಕೆ
• ಬಸ್ ಸಂಚಾರಕ್ಕೆ ಅವಕಾಶ
• ಬಸ್ ಗಳಲ್ಲಿ ಶೇಕಡಾ. 50 ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
• ಸಿನೆಮಾ ಮಂದಿರ ಹಾಗೂ ದೇವಾಲಯಗಳಲ್ಲಿ ನಿರ್ಬಂಧ ಮುಂದುವರಿಕೆ
• ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಮಂಡ್ಯ, ತುಮಕೂರು, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಗದಗ, ಬೆಂಗಳೂರು, ಕೋಲಾರ, ರಾಯಚೂರು, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಣೆ ಮಾಡಲಾಗಿದೆ.ಉಳಿದ 13 ಜಿಲ್ಲೆಗಳಲ್ಲಿ ಹಾಲಿ ನಿರ್ಬಂಧಗಳು ಮುಂದುವರಿಕೆ
• ಶಾಪಿಂಗ್ ಕಾಂಪ್ಲೆಕ್ಸ್ ಗಳು ಮುಂದಿನ ಆದೇಶದ ತನಕ ತೆರೆಯುವಂತಿಲ್ಲ
• ಮಂದಿರ, ಚರ್ಚ್, ಮಸೀದಿಗಳು ತೆರೆಯುವುದಕ್ಕೆ ಅವಕಾಶವಿಲ್ಲ
• ಸೋಮವಾರದಿಂದ ಬಟ್ಟೆ ಅಂಗಡಿಗಳಿಗೆ ಬೆಳಗ್ಗೆ 6 ರಿಂದ ಸಂಜೆ 5 ಗಂಟೆಯ ತನಕ ತೆರೆಯಲು ಅವಕಾಶ
• ಶೇಕಡಾ 5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿ 13 ಜಿಲ್ಲೆಗಳಲ್ಲಿ ಈ ಹಿಂದಿನ ನಿರ್ಬಂಧಗಳು ಮುಂದುವರಿಕೆ
• ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯ.
• ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
• ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ
• ಶೇ. 10 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರಿಕೆ