ಬೆಂಗಳೂರು : ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಉಡುಪಿ ಪರ್ಯಾಯೋತ್ಸವಕ್ಕೆ ಪರ್ಯಾಯೋತ್ಸ ಸಮಿತಿಯ ಗೌರವ ಕಾರ್ಯಾಧ್ಯಕ್ಷರು, ಶಾಸಕ ಕೆ. ರಘುಪತಿ ಭಟ್ ಆಹ್ವಾನಿಸಿದರು.
ಪರ್ಯಾಯೋತ್ಸವ ಸಮಿತಿಯ ಉಪಾಧ್ಯಕ್ಷ ಶ್ರೀಪತಿ ಭಟ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್, ಆರ್ಥಿಕ ಸಮಿತಿ ಸಂಚಾಲಕ ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿದ್ದರು.