ಕೋವಿಡ್ ಲಾಕ್ ಡೌನ್ ಬಳಿಕ ಮೊಟ್ಟಮೊದಲ ವಿಧಾನಮಂಡಲ ಅಧಿವೇಶನವನ್ನು ಸೆಪ್ಟೆಂಬರ್ 21 ರಿಂದ 30ರವರೆಗೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವಾರು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಈ ಬಾರಿಯ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಸಭೆಯಲ್ಲಿ ಸಹಕಾರ ಸಂಘಗಳ ಚುನಾವಣೆಯನ್ನು ಕೂಡ ಮುಂದೂಡುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಬೆಳೆ ಸಮೀಕ್ಷೆಯ ಅವಧಿಯನ್ನು ಹತ್ತು ದಿನಗಳ ಕಾಲ ಮುಂದೂಡಲಾಗಿದೆ.