ಡಾ. ಡಿ. ವೀರೇಂದ್ರ ಹೆಗ್ಗಡೆ ಜೊತೆಗೆ ಮುಜರಾಯಿ ಸಚಿವರ ಚರ್ಚೆ

ಬೆಂಗಳೂರು : ಇಂದು ಬೆಂಗಳೂರಿನಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಹಿಂದೂ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿಯಾದರು.

ಈ ವೇಳೆ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳಾದ ಬಡವರ ಸರಳ ಸಾಮೂಹಿಕ ವಿವಾಹ “ಸಪ್ತಪದಿ”, “ದೇಗುಲದ ಕಲ್ಯಾಣಿ ಜೀರ್ಣೋದ್ದಾರ” ಹಾಗೂ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಹೆಗ್ಗಡೆಯವರು ಹಲವಾರು ಉತ್ತಮ ಸಲಹೆಗಳನ್ನು ನೀಡಿದರು.

 
 
 
 
 
 
 
 
 
 
 

Leave a Reply