ತೀರ್ಥಹಳ್ಳಿ ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ 350 ಕೋಟಿ  ಬಿಡುಗಡೆ  : ಯಶ್ ಪಾಲ್ ಸುವರ್ಣ ಅಭಿನಂದನೆ.

ಹೆಬ್ರಿಯಿಂದ ಪರ್ಕಳವರೆಗೆ ಮತ್ತು ಕರಾವಳಿ ಜಂಕ್ಷನ್ ನಿಂದ ಮಲ್ಪೆಯವರೆಗಿನ ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯ ಅಗಲೀಕರಣಕ್ಕೆ  ಹಸಿರು ನಿಶಾನೆ ನೀಡಿ, ಒಟ್ಟು 29 ಕಿಲೋಮೀಟರ್ ಉದ್ದದ ದ್ವಿಪಥ/ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ 350 ಕೋಟಿ ರೂ.(ಭೂಸ್ವಾಧೀನ ಸಹಿತ) ಅನುದಾನವನ್ನು  ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ನಾಗರೀಕರ ಬಹು ದಶಕಗಳ ಬೇಡಿಕೆಗೆ  ಸಕಾರಾತ್ಮಕವಾಗಿ ಸ್ಪಂದಿಸಿ ಕೊರೊನಾ  ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಆದ್ಯತೆ ಮೇರೆಗೆ ಅನುದಾನ ಬಿಡುಗಡೆ ಮಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಕೇಂದ್ರ ಕೇಂದ್ರ ಭೂ ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಮುಖ್ಯ ಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಹಾಗೂ ಯೋಜನೆ ಕಾಮಗಾರಿ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀ ರಘುಪತಿ ಭಟ್, ಸುನೀಲ್ ಕುಮಾರ್ ರವರಿಗೆ ಅಭಿನಂದನೆ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply