ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಓವರ್‌ಪಾಸ್ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುಮೋದನೆ : ಯಶ್‌ಪಾಲ್ ಸುವರ್ಣ ಅಭಿನಂದನೆ

ಉಡುಪಿ: ಕಟಪಾಡಿ ಆಸುಪಾಸಿನ ಜನತೆಯ ಬೇಡಿಕೆಯಾಗಿದ್ದ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ 22.27 ಕೋಟಿ ವೆಚ್ಚದಲ್ಲಿ ಓವರ್‌ಪಾಸ್ ನಿರ್ಮಾಣಕ್ಕೆ ಅನುಮೋದನೆ ನೀಡಿದ ಕೇಂದ್ರ ಸರಕಾರಕ್ಕೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಶಿರ್ವ, ಮಣಿಪುರ, ಮಟ್ಟು ಪರಿಸರದ ಜನತೆಯ ದಿನನಿತ್ಯದ ಸಮಸ್ಯೆಗೆ ಸ್ಪಂದಿಸಿ ನೂತನ ಓವರ್‌ಪಾಸ್ ನಿರ್ಮಾಣಕ್ಕೆ ಅನುಮೋದನೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು,ವಿಶೇಷ ಮುತುವರ್ಜಿ ವಹಿಸಿದ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಜನಪ್ರತಿನಿಧಿಗಳಿಗೆ ಧನ್ಯವಾದ ಸಲ್ಲಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply