ಮಾಜಿ ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ!

ಮಾಜಿ ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ದೊಡ್ಡ ದುರಂತವೊಂದು ತಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಹೆಲಿಪ್ಯಾಡ್ ನಲ್ಲಿ ನಡೆದಿದೆ.

ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ಕೂಡಲೇ ಎಚ್ಚೆತ್ತ ಪೈಲೆಟ್ ಕಾಪ್ಟರ್ ಲ್ಯಾಂಡಿಂಗ್ ಮಾಡಿಲ್ಲ. ಈ ಘಟನೆ ಕೆಲಕಾಲ ಆತಂಕಕ್ಕೆ ಕಾರಣವಾಯ್ತು. ಹೆಲಿಪ್ಯಾಡ್ ಬಳಿ ಇರೋ ಜಮೀನಿನಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಹಾಕಲಾಗಿತ್ತು. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿದೆ. ಪೈಲೆಟ್ ಸಮಯಪ್ರಜ್ಞೆಯಿಂದ ಸ್ವಲ್ಪದರಲ್ಲೇ ದುರಂತ ತಪ್ಪಿದೆ.

ಕೂಡಲೇ ಪೊಲೀಸರು, ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ್ದಾರೆ. ಲ್ಯಾಂಡಿಂಗ್ ಮಾಡದೆ ಆಕಾಶದಲ್ಲೇ ಹಾರಾಟ ನಡೆಸಿದ ಹೆಲಿಕಾಪ್ಟರ್ ಅನ್ನು ಬಳಿಕ ಪೈಲೆಟ್ ಲ್ಯಾಂಡ್ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply