ಮೊಹಮ್ಮದ್ ಸುಭಾನ್ ಗಡಿಪಾರು

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮದ ಜಾಮಿಯಾ ಮೊಹಲಾ, ಮೀನು ಮಾರ್ಕೆಟ್ ಬಳಿಯ ನಿವಾಸಿ ಸಿರಾಜ್ ರವರ ಮಗ 25 ವರ್ಷ ಪ್ರಾಯದ ಮೊಹಮ್ಮದ್ ಸುಭಾನ್ ಎಂಬಾತನು ರೌಡಿ ಆಸಾಮಿಯಾಗಿದ್ದು, ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈತನು ತನ್ನ 20ನೇ ವಯಸ್ಸಿನಲ್ಲಿಯೇ ಅಪರಾಧ ಪ್ರಕರಣಗಳಲ್ಲಿ, ಭಾಗಿಯಾಗುವುದಕ್ಕೆ ಪ್ರಾರಂಭ ಮಾಡಿದ್ದು, ತನ್ನ ಸಹಚರರೊಂದಿಗೆ ಸೇರಿಕೊಂಡು ತಮ್ಮದೇ ಆದ ಒಂದು ತಂಡವನ್ನು ಕಟ್ಟಿಕೊಂಡು,ಸರ್ವಜನಿಕ ಸ್ಥಳದಲ್ಲಿ ಹೊಡೆದಾಟ, ದನ ಕಳ್ಳತನ, ಹಾಗೂ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನು ಕಳೆದ 5 ವರ್ಷಗಳಿಂದ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ನಡೆದುಕೊಂಡು ಬರುತ್ತಿದ್ದು ಸಂಬಂಧ ಈತನ ವಿರುದ್ಧ ಹಲವು ಕಾನೂನು ಕ್ರಮ ಸಹ ಜರುಗಿಸಲಾಗಿರುತ್ತದೆ.

ಈತನ ಗೂಂಡಾ ಪ್ರವೃತ್ತಿಗೆ ಹೆದರಿಕೊಂಡುಹಲವರು ಈತನ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ದೂರುಗಳನ್ನು ನೀಡಲು ಮುಂದೆ ಬರುತ್ತಿಲ್ಲವೆಂದು ತಿಳಿದು ಬಂದಿರುತ್ತದೆ. ಈತನ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ ಈತನ ಕೆಲವು ಪ್ರಕರಣಗಳಲ್ಲಿ ದಸ್ತಗಿರಿಯಾಗಿ ನ್ಯಾಯಾಂಗ ಬಂಧನಕ್ಕೊಳಪಟ್ಟಿದ್ದರೂ ಸಹಾ ತನ್ನ ನಡವಳಿಕೆಯಲ್ಲಿ ಬದಲಾವಣೆ ತಂದುಕೊಳ್ಳದೇ ತನ್ನ ಅಪರಾಧಚಟುವಟಿಕೆಗಳನ್ನು ಮುಂದುವರೆಸಿಕೊಂಡು ಬಂದಿರುವುದಾಗಿದೆ. ಈತನ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ, ಒಟ್ಟು 05 ಪ್ರಕರಣಗಳು ದಾಖಲಾಗಿರುತ್ತವೆ.

ಈತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೊರ ಬಂದ ನಂತರವು ಕೂಡ ಪುನಃ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದಿರುತ್ತಾನೆ. ಈ ಬಗ್ಗೆ ಮೇಲಾಧಿಕಾರಿಯವರ ಆದೇಶದಂತೆ ಗಂಗೊಳ್ಳಿ, ಪೊಲೀಸ್ ಠಾಣಾ ಪಿ.ಎಸ್.ಐ ರವರು ಮಾನ ಉಪವಿಭಾಗ ದಂಡಾಧಿಕಾರಿಯವರು ಕುಂದಾಪುರ ಉಪವಿಭಾಗ ರವರಿಗೆ ವರದಿಯನ್ನು ಸಲ್ಲಿಸಿರುತ್ತಾರೆ. ಮಾನ ಉಪವಿಭಾಗ ದಂಡಾಧಿಕಾರಿಯವರು ಕುಂದಾಪುರ ಉಪವಿಭಾಗ ರವರು ಗಂಗೊಳ್ಳಿ ಪೊಲೀಸ್ ಠಾಣಾ ಪಿ.ಎಸ್.ಐ ರವರು ಸಲ್ಲಿಸಿದ ವರದಿಯನ್ನು ಪರಿಶೀಲನೆ ನಡೆಸಿ ದಿನಾಂಕ:17-10-2022 ರಂದು 6 ತಿಂಗಳ ಕಾಲ ಚಳ್ಳಕೆರೆ ಉಪವಿಭಾಗಕ್ಕೆ ಮೊಹಮ್ಮದ್ ಸುಭಾನ್ ಎಂಬಾತನನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿರುತ್ತಾರೆ. ಅಲ್ಲದೆ 6 ತಿಂಗಳ ಒಳಗೆ ಸಂಬಂಧಪಟ್ಟ ಪ್ರಾಧಿಕಾರದ ಅನುಮತಿಯನ್ನು ಪಡೆಯದೆ ಕುಂದಾಪುರ ಪೊಲೀಸ್ ಉಪವಿಭಾಗದಲ್ಲಿ ಯಾವುದೇ ಕಾರಣಕ್ಕೂ ಕಂಡು ಬಂದಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಿಗೆ ಸದ್ರಿಯವರನ್ನು ದಸ್ತಗಿರಿ ಮಾಡುವಂತೆ ಆದೇಶವನ್ನು ಹೊರಡಿಸಿರುತ್ತಾರೆ.

 
 
 
 
 
 
 
 
 
 
 

Leave a Reply