ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿಗೆ ಮನವಿ

 
 ಉಡುಪಿ : ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಮೇಲಿನ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಕಬ್ಬು  ಬೆಳೆಯ ಅಭಿವೃದ್ಧಿಗಾಗಿ ಹತ್ತು ಕೋಟಿ ಅನುದಾನವನ್ನು ಉಡುಪಿ ಜಿಲ್ಲೆಗೆ ನೀಡುವಂತೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಯವರು ಮನವಿಯನ್ನು ಸಲ್ಲಿಸಿದರು.
ಬ್ರಹ್ಮಾವರ ಸಕ್ಕರೆ‍ ಕಾರ್ಖಾನೆಯಲ್ಲಿ ಇತೆನಾಲ ಸಕ್ಕರೆ ಮತ್ತು ವಿದ್ಯುಚ್ಛಕ್ತಿ ಉತ್ಪಾದನೆಗೆ ಯೋಜನೆಯನ್ನು ರೂಪಿಸಿ ಕಾರ್ಖಾನೆಯ ಪುನರ್ ನಿರ್ಮಾಣ ಮಾಡಬೇಕೆಂದು ವಿನಂತಿಸಿಕೊಂಡರು.  
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಸಾಲ ಮನ್ನಾದ ಬಗ್ಗೆ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವ ವಿ ಸುನಿಲ್ ಕುಮಾರ್ ಉಡುಪಿ ಶಾಸಕ ಕೆ ರಘುಪತಿ ಭಟ್ , ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ , ಉದಯ ಕುಮಾರ್ ಶೆಟ್ಟಿ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಉಮಾನಾಥ ಶೆಟ್ಟಿ, ನಿರ್ದೇಶಕ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು
 
 
 
 
 
 
 
 
 
 
 

Leave a Reply