ಹೊಳೆಗೆ ಸ್ನಾನ ಮಾಡಲು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು..!!

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ‌ಸುಳ್ಯ ಸಮೀಪದ ಕುಕ್ಕುಂಬಳ ಹೊಳೆಗೆ ಸ್ನಾನ ಮಾಡಲು ತೆರಳಿದ ಮಂಗಳೂರಿನ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಅರಂತೋಡಿನಲ್ಲಿ ನಡೆದಿದೆ.
ಸಾವನ್ನಪ್ಪಿದ ಬಾಲಕ ಮಂಗಳೂರಿನ ಮನ್ವಿತ್(12 ) ಎಂದು ತಿಳಿದು ಬಂದಿದೆ.
ದಾಮೋದರ ಶೆಟ್ಟಿಯವರ ಮಗಳನ್ನು ಮಂಗಳೂರಿಗೆ ವಿವಾಹ ಮಾಡಿಕೊಡಲಾಯಿತು. ರಜೆಯ ಸಮಯವಾದರಿಂದ ಕುಕ್ಕುಂಬಳ ತನ್ನ ಅಜ್ಜನ ಮನೆಗೆ ಬಂದಿದ್ದನು ಸಂಜೆ ಇಬ್ಬರು ಬಾಲಕರು ಸ್ನಾನ ಮಾಡಲು ಕುಕ್ಕುಂಬಳ ಹೊಳೆಗೆ ತೆರಳಿದ್ದರು. ಸ್ನಾನ ಮಾಡುತ್ತ ಆಡವಾಡುತ್ತಿದ್ದಾಗ ಮನ್ವಿತ್ ನೀರಿನ ಸೆಳೆತೆಗೆ ಸಿಲುಕಿಕೊಂಡು ನೀರಲ್ಲಿ ಮುಳುಗಿ ಹೋದ ಎನ್ನಲಾಗಿದೆ.
ಸಹ ಪಾಟಿ ನೀರಲ್ಲಿ ಮುಳುಗಿದ ವಿಷಯವನ್ನು ಜತೆಗಿದ್ದ ಹುಡುಗ ಮನೆಯವರಿಗೆ ಬಂದು
ತಿಳಿಸಿದ್ದಾನೆ.

ಬಳಿಕ ಶರತ್ ಅಡ್ಯಡ್ಕ, ನಿಧೀಶ್ ಅರಂತೋಡು,ತಾಜುದ್ದೀನ್ ಅರಂತೋಡು, ಮುನೀರ್ ಸಂಟ್ಯಾರ್, ಫಯಾಜ್ ಪಟೇಲ್, ಸಂಸುದ್ದೀನ್ ಪೇಲ್ತಡ್ಕ ರವರು ಕಾರ್ಯಾಚರಣೆ ಮಾಡಿ ಮೃತದೇಹ ಮೇಲಕ್ಕೆತ್ತಿದ್ದಾರೆ.

ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply