ಹೋರಾಟ ಅಕ್ರಮದ ವಿರುದ್ಧವೇ ಹೊರತು ಎಚ್ಡಿಕೆ, ವಿರುದ್ಧವಲ್ಲ – ಸುಮಲತಾ

ಬೆಂಗಳೂರು : ನನ್ನ ಹೋರಾಟ ಏನಿದ್ದರೂ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ವಿರುದ್ಧ ಕುಮಾರಸ್ವಾಮಿ ವಿರುದ್ಧವಾಗಲಿ, ಜೆಡಿಎಸ್ ಕಾರ್ಯಕರ್ತರ ವಿರುದ್ಧವಾಗಲಿ ನಾನೆಂದೂ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿಕೆ ನೀಡಿದ್ದಾರೆ.

ನಾವು ದ್ವೇಷದ ರಾಜಕಾರಣ ಮಾಡುವುದು ಬೇಡ, ಜೆಡಿಎಸ್ ನಾಯಕರು ಹೊರಟ ದಾರಿಯಲ್ಲಿ ಹೋಗುವುದ ಬೇಡ.ನ್ಯಾಯುತವಾಗಿ, ಶಾಂತಿಯಿಂದ ಅಕ್ರಮ ಗಣಿಗಾರಿಕೆ ಮತ್ತು ಕೆಆರ್ ಎಸ್ ಡ್ಯಾಂ ರಕ್ಷಣೆ ಬಗ್ಗೆ ಹೋರಾಡೋಣ ಎಂದು ಸುಮಲತಾ ಅವರು ಅಂಬರೀಷ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.ಸಂಸತ್ತು ಅಧಿವೇಶನದಲ್ಲಿ ಕೂಡ ಅಕ್ರಮ ಗಣಿಗಾರಿಕೆ ಬಗ್ಗೆ ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಇಂದು ಅಂಬಿ ಅಭಿಮಾನಿಗಳು ಎಚ್​ಡಿಕೆ ವಿರುದ್ಧ ಬೆಂಗಳೂರು ಕಂಠೀರವ ಸ್ಟುಡಿಯೋ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಅಂಬರೀಶ್ ಫೋಟೋ ಹಿಡಿದು ಪ್ರತಿಭಟನೆ ನಡೆಸಿದ ಅಭಿಮಾನಿಗಳು ಕುಮಾರಸ್ವಾಮಿ ಮತ್ತು ರವೀಂದ್ರ ಶೀಕಂಠಯ್ಯ ವಿರುದ್ಧ ಧಿಕ್ಕಾರ ಕೂಗಿದರು.

 
 
 
 
 
 
 
 
 
 
 

Leave a Reply