ಕೃಷ್ಣ ವೇಷ, ನೃತ್ಯ ಸ್ಪರ್ಧೆಯ ವಿಜೇತರಿಗೆ ಇಂಧನ ಸಚಿವರಿಂದ ಬಹುಮಾನ ವಿತರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ವಿಭಾಗ ಇವರ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ರಾಜ್ಯ ಮಟ್ಟದ ಶ್ರೀ ಕೃಷ್ಣ ಜಯಂತಿ

ಆಚರಣೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಡೆದ ಕುಣಿದಾಡೋ ಕೃಷ್ಣ ಕುಣಿದಾಡೋ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಕೃಷ್ಣನ ವೇಷ ಮತ್ತು ನೃತ್ಯ ಸ್ಪರ್ಧೆಯ ವಿಜೇತರಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ ಬಹುಮಾನ ವಿತರಿಸಿದರು. ಶ್ರೀ ವಿಧ್ಯಾಸಾಗರ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. 

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಶಾಸಕ ಕೆ. ರಘುಪತಿ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 
ನೃತ್ಯ ಸ್ಪರ್ಧೆ : ಉಡುಪಿಯ ಸೃಷ್ಠಿ ನೃತ್ಯ ಕಲಾ ಕುಟೀರ ಪ್ರಥಮ, ಕಾರ್ಕಳದ ಮುನಿಯಾಲ್ ಆಯುರ್ವೇದಿಕ್ ಮೆಡಿಕಲ್ ಸೈನ್ಸ್ ಕಾಲೇಜು ದ್ವಿತೀಯ ಹಾಗೂ ಮೂಡುಬಿದಿರೆಯ ಆಳ್ವಾಸ್ ತೃತೀಯ ಬಹುಮಾನ ಪಡೆಯಿತು.
ಕೃಷ್ಣನ ವೇಷ ಸ್ಪರ್ಧೆಯ ವಿಜೇತರು: ಮಂಗಳೂರು ನಂದ ಗೋಕುಲ ಶ್ವೇತಾ ಅರೆಹೊಳೆ ಪ್ರಥಮ, ಉಡುಪಿಯ ಸೃಷ್ಠಿ ನೃತ್ಯ ಕಲಾ ಕುಟೀರದ ಜಾನಕಿ ದ್ವಿತೀಯ ಹಾಗೂ ಉಡುಪಿ ಅಮ್ಮುಂಜೆಯ ಶ್ರೀ ಭ್ರಾಮರಿ ನಾಟ್ಯಾಲಯದ ಯಶಸ್ವಿ ತೃತೀಯ ಬಹುಮಾನ ಪಡೆದರು
 
 
 
 
 
 
 
 
 
 
 

Leave a Reply