ಬೂತ್ ಮಟ್ಟದ ಕಾರ್ಯಕರ್ತರೇ ಪಕ್ಷದ ಆಸ್ತಿ ~ಬೈಕಾಡಿ ಸುಪ್ರಸಾದ್ ಶೆಟ್ಟಿ

ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರಿಗೆ ಮತ್ತು ಸಂಘಟನೆಗೆ ಹೆಚ್ಚು ಪ್ರಾತಿನಿಧ್ಯ ಕೊಡುವಂತಹ ಪಕ್ಷ. ಬೂತ್ ಮಟ್ಟದ ಕಾರ್ಯಕರ್ತರಿಂದ ಪಕ್ಷ ನಿರ್ಮಾಣ ಆಗಿದೆ ,ಸಶಕ್ತ ಮತ್ತು ಸದೃಢ ಬೂತ್ ನ ಸಂಘಟನೆ ಪಕ್ಷದ ಗುರಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಕುಂದಾಪುರ ಮಂಡಲದ ಬೀಜಾಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಇವರು ಉತ್ತಮ ಸಮಾಜದ ನಿರ್ಮಾಣ, ಅಭಿವೃದ್ಧಿ ,ಸೇವೆಯ ಮೂಲಕ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂತೃಪ್ತಿಯನ್ನು ಕಾಣಬೇಕು ಎನ್ನುವ ಆಶಯವನ್ನು ವ್ಯಕ್ತಪಡಿಸಿದರು
ಈ ಸಭೆಯನ್ನು ಕರ್ನಾಟಕ ಸರಕಾರದ ಆಹಾರ ನಿಗಮದ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿಯವರು ಉದ್ಘಾಟಿಸಿದರು. ಕುಂದಾಪುರ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಯವರು ಸಂಘಟನಾತ್ಮಕವಾಗಿ ಬೂತ್ ಕಾರ್ಯಕರ್ತರಿಗೆ ಮಾರ್ಗದರ್ಶನವನ್ನು ಮಾಡಿದರು.


ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಉಳ್ತೂರು ಅಧ್ಯಕ್ಷತೆಯನ್ನು ವಹಿಸಿದರು ಮಂಡಲದ ಪ್ರಧಾನ ಕಾರ್ಯದರ್ಶಿ ವಕ್ವಾಡಿ ಸತೀಶ್ ಪೂಜಾರಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಂಡಲದ ಪ್ರಧಾನ ಕಾರ್ಯದರ್ಶಿ ಗೋಪಾಡಿ ಸುರೇಶ್ ಶೆಟ್ಟಿ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಮನೋಜ್ ಕರ್ಕೇರ ಪಕ್ಷದ ನಾಯಕರಾದ ಸಂಪತ್ ಶೆಟ್ಟಿ ಕೆದೂರು ಉಪಸ್ಥಿತರಿದ್ದರು ಯುವ ಮೋರ್ಚದ ಅಧ್ಯಕ್ಷ ಅವಿನಾಶ್ ಉಳ್ತೂರು ಸ್ವಾಗತಿಸಿದರು ಪ್ರತಾಪ್ ಶೆಟ್ಟಿ ಉಳ್ತೂರು ಕಾರ್ಯಕ್ರಮ ನಿರ್ವಹಿಸಿದರು ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್ ವಂದೇ ಮಾತರಂ ಹಾಡಿದರು .

 
 
 
 
 
 
 
 
 

Leave a Reply