ಟೋಲ್ ಗೇಟ್ ಚಲೋ ಪಾದಯಾತ್ರೆಯ ಪೋಸ್ಟರ್ ಬಿಡುಗಡೆ

ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವಿಗಾಗಿ ಮಾರ್ಚ್ 15 ರಂದು ನಡೆಯಲಿರುವ ಹೆಜಮಾಡಿಯಿಂದ ಸುರತ್ಕಲ್ ಟೋಲ್ ಗೇಟ್ ವರಗೆ ನಡೆಯಲಿರುವ ಪಾದಯಾತ್ರೆಯ ಸಿದ್ದತೆ ಭರದಿಂದ ನಡೆಯುತ್ತಿದೆ. ಇಂದು ಪಾದಯಾತ್ರೆಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ನಲ್ಲಿ “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ”ಯ ಪ್ರಮುಖರ ಉಪಸ್ಥಿತಿಯಲ್ಲಿ ನಡೆಯಿತು.

ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಮಾಜಿ ಉಪ‌ಮೇಯರ್ ಪುರುಷೋತ್ತಮ ಚಿತ್ರಾಪುರ, ಖ್ಯಾತ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ, ಉದ್ಯಮಿ ವೈ ರಾಘವೇಂದ್ರ ರಾವ್ ಸುರತ್ಕಲ್, ಟ್ಯಾಕ್ಸಿ ಮೆನ್ ಮ್ಯಾಕ್ಸಿಕ್ಯಾಬ್ ಅಸೋಷಿಯೇಷನ್ ನ ಜಿಲ್ಲಾ ಅಧ್ಯಕ್ಷ ದಿನೇಶ್ ಕುಂಪಲ, ದಲಿತ ನಾಯಕ ಶೇಖರ್ ಹೆಜಮಾಡಿ, ಲಾರಿ ಮಾಲಕರ ಸಂಘದ ಮೂಸಬ್ಬ ಪಕ್ಷಿಕೆರೆ, ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ನಾಗರಿಕ ಸಮಿತಿ ಕುಳಾಯಿ ಇದರ ಕಾರ್ಯದರ್ಶಿ ಗಂಗಾಧರ ಕುಳಾಯಿ, ಮಾಜಿ ಕಾರ್ಪೊರೇಟರ್ ಅಯಾಜ್ ಕೃಷ್ಣಾಪುರ, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರಾದ ಟಿ ಎನ್ ರಮೇಶ್, ಶ್ರೀನಾಥ್ ಕುಲಾಲ್, ರಾಜೇಶ್ ಪೂಜಾರಿ ಕುಳಾಯಿ, ಶ್ರೀಕಾಂತ್ ಸಾಲ್ಯಾನ್ ಗುಡ್ಡೆಕೊಪ್ಲ, ಅಜ್ಮಲ್ ಕಾನ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply