ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ನಿವೃತ್ತ ಮುಖ್ಯೋಪಧ್ಯಾಯರಿಗೆ ಸನ್ಮಾನ

ಟಿ.ಎ.ಪೈ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್, ಕುಂಜಿಬೆಟ್ಟು, ಉಡುಪಿ ಇಲ್ಲಿ ಕಳೆದ 19 ವರ್ಷಗಳಿಂದ ಶಿಕ್ಷಕರಾಗಿ, 12 ವರ್ಷಗಳಿಂದ ಮುಖ್ಯೋಪಾಧ್ಯಾಯರಾಗಿ ಸೇವೆ
ಸಲ್ಲಿಸಿದ್ದ ಶ್ರೀ ಮಂಜುನಾಥ ಎ ವಿ ಅಕ್ಟೋಬರ್ ತಿಂಗಳಿನಲ್ಲಿ ಸೇವಾ ನಿವೃತ್ತಿಹೊಂದಿದ್ದು ಅವರನ್ನು ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಆಡಳಿತ ಮಂಡಳಿ,
ಸಿಬ್ಬoದಿ ವರ್ಗ, ವಿದ್ಯಾರ್ಥಿ ಹಾಗೂ ಶಿಕ್ಷಕ ರಕ್ಷಕ ಸಂಘದ ವತಿಯಿoದ ಸನ್ಮಾನಿಸಲಾಯಿತು. ಮುಖ್ಯ ಅತಿಥಿ ಶಾರದಾ ರೆಸಿಡೆನ್ಸಿಯಲ್ ಸ್ಕೂಲಿನ ಪ್ರಾಂಶುಪಾಲರಾದ ಶ್ರೀ ವಿನ್ಸೆಂಟ್ ಡಿ ಕಾಸ್ಟ, ಮಣಿಪಾಲ ಅಕಾಡೆಮಿ ಆಫ್ ಜನರಲ್
ಎಜುಕೇಶನ್ನಿನ ಕಾರ್ಯದರ್ಶಿಯಾದ ಶ್ರೀ.ವರದರಾಯ ಪೈ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ. ಆಶಾ ವಿ ಶೆಟ್ಟಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ . ವಿನೋದಾ ಶೆಟ್ಟಿ, ವಿದ್ಯಾರ್ಥಿ ನಾಯಕ ಆಶ್ಲೇಷ್ ಆರ್ ಭಟ್ ಹಾಗೂ ವಿದ್ಯಾರ್ಥಿ ನಾಯಕಿ ಪರಿಣಿಕ ಯು ವಿ
ಉಪಸ್ಥಿತರಿದ್ದರು. ಕನ್ನಡ ಅಧ್ಯಾಪಕ ಶ್ರೀ ರಮೇಶ್ ಭಟ್ ಹಾಗೂ ಸಂಸ್ಕೃತ ಶಿಕ್ಷಕಿ ಶ್ರೀಮತಿ.ಜಯಲಕ್ಷ್ಮೀ ಶೆಟ್ಟಿಗಾರ್ ಸನ್ಮಾನಿತರನ್ನು ಪರಿಚಯಿಸಿದರು. ಸನ್ಮಾನಿತ
ಶ್ರೀ ಮಂಜುನಾಥ ಎ ವಿ ಅವರು ತಮ್ಮ ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು.

 
 
 
 
 
 
 
 
 
 
 

Leave a Reply