ಉಡುಪಿ: ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲಿ ಬಿದ್ದಿದ್ದ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅಮಾನತು

ಉಡುಪಿ, ಡಿ.29: ಶಾಲಾ ಕೆಲಸದ ಅವಧಿಯಲ್ಲಿ ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲಿ ಮಲಗಿ ಸುದ್ದಿ ಯಾಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್‌ ರನ್ನು ಡಿಡಿಪಿಐ ಗಣಪತಿ ಕೆ. ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ.

ಡಿ.27ರಂದು ಬೆಳಗ್ಗೆ ವಿಪರೀತ ಮದ್ಯಪಾನ ಮಾಡಿ ಶಾಲೆಯಲ್ಲಿ ಅಸಭ್ಯವಾಗಿ ವರ್ತಿಸಿದ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬ್ರಹ್ಮಾವರ ವಲಯದ ಬಿಇಓ ಅವರನ್ನು ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಳುಹಿಸಿ ಘಟನೆಯ ಸತ್ಯಾಸತ್ಯತೆಯ ಅಧ್ಯಯನ ವರದಿ ಪಡೆದು ಅದರ ಆಧಾರ ದಲ್ಲಿ ತಪ್ಪಿತಸ್ಥರೆಂದು ಕಂಡು ಬಂದ ಕೃಷ್ಣ ಮೂರ್ತಿ ನಾಯಕ್‌ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿ ನಲ್ಲಿಡಲಾಗಿದೆ ಎಂದು ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.

ಶಿಕ್ಷಕರು ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವು ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಇಲಾಖಾ  ತನಿಖೆಯನ್ನು ಕಾಯ್ದಿರಿಸಿ ಕರ್ತವ್ಯದಿಂದ ಅಮಾನತುಗೊಳಿಸಿ ರುವುದಾಗಿ ಡಿಡಿಪಿಐ ಆದೇಶದಲ್ಲಿ ತಿಳಿಸಿದ್ದಾರೆ.

ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್‌ ಡಿ.27ರಂದು ಕಂಠಪೂರ್ತಿ ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲೇ ಮಲಗಿದ್ದರೆನ್ನಲಾದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

 
 
 
 
 
 
 
 
 
 
 

Leave a Reply