ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ನಿಯಮಗಳಿಗೆ ವಿರುದ್ಧವಾಗಿ ಹೋಟೆಲ್ ನಲ್ಲಿ ಊಟ ಮಾಡಿದ ಆರೋಪದಡಿಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ದೂರಿನ ಆಧಾರದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಇದು ಎಫ್.ಐ.ಆರ್ ಅಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಗಾಯಕ ವಿಜಯ ಪ್ರಕಾಶ್ ಜತೆ ಸಂಸದ ತೇಜಸ್ವಿ ಸೂರ್ಯ ಹೋಟೆಲ್ ಒಂದರಲ್ಲಿ ಊಟ ಮಾಡಿದ್ದು, ಈ ಫೋಟೋ ವೈರಲ್ ಆಗಿತ್ತು. ಇದನ್ನು ಆಧರಿಸಿ ವಿಜಯ ಡೇವಿಸ್ ಎಂಬವರು ಪೊಲೀಸರಿಗೆ ದೂರು ನೀಡಿದ್ದರು.