ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರ ತೆಕ್ಕಟ್ಟೆ – ಉಚಿತ ಗಿಡ ವಿತರಣಾ ಕಾರ್ಯಕ್ರಮ.

ಕೋಟ: ಸ್ವಾತಂತ್ರೋತ್ಸದ ಅಮೃತ ಮಹೋತ್ಸವದ ಅಂಗವಾಗಿ ತೆಕ್ಕಟ್ಟೆ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದಲ್ಲಿ ವಿವಿಧ ತಳಿಯ ಗಿಡಗಳ ವಿತರಣಾ ಕಾರ್ಯಕ್ರಮ ತೆಕ್ಕಟ್ಟೆ ಜನ ಔಷಧಿ ಕೇಂದ್ರದ ವಠಾರದಲ್ಲಿ ಶನಿವಾರ ಜರುಗಿತು. ಇಲ್ಲಿನ ಹಿರಿಯ ವೈದ್ಯ ಡಾ| ಕೃಷ್ಣಯ್ಯ ಶೆಟ್ಟಿ ಗಿಡಗಳನ್ನು ನೀಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಪ್ರಭಾಕರ್ ಆಚಾರ್ಯ, ಜಯಂಟ್ಸ್ ಫೆಡರೇಶನ್‌ನ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು, ಜಯಂಟ್ಸ್ ಬ್ರಹ್ಮಾವರದ ಅಧ್ಯಕ್ಷ ಸುಂದರ್ ಪೂಜಾರಿ ಮೂಡುಕುಕ್ಕಡೆ, ಕಾರ್ಯಕಾರಿ ನಿರ್ದೇಶಕ ಶ್ರೀನಾಥ್ ಕೋಟ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಉಮೇಶ್, ಕಟ್ಟಡ ಮಾಲೀಕರಾದ ಕೃಷ್ಣಮೂರ್ತಿ ಕೊಠಾರಿ,ಕೋಟದ ಕಲ್ಲಟ್ಟು ಮಹಾಲಿಂಗೇಶ್ವರ ದೇವಳದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಹರೀಷ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply