ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಶೈನ್ ಪ್ರೊಜೆಕ್ಟ್ ಸಹಯೋಗದೊಂದಿಗೆ ಸ್ಟಾಕ್ ಮಾರ್ಕೆಟ್ ಅರಿವು ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಯಿತು.
ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಶೈನ್ ಸಂಸ್ಥೆಯ ನಿರ್ದೇಶಕರು ಹಾಗೂ ಸ್ಟಾಕ್ಮಾರ್ಕೆಟ್ ಅನಾಲಿಸ್ಟ್ ಶ್ರೀ ಶ್ರೀಹರ್ಷ ವಿಶೇಷ ಉಪನ್ಯಾಸ ನೀಡಿದರು. ಸ್ಟಾಕ್ ಮಾರ್ಕೆಟ್ನ ವಿವಿಧ ಆಯಾಮಗಳ ಬಗ್ಗೆ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಶಾಸ್ರ ಸ್ನಾತಕೋತ್ತರ ಪದವಿ ವಿಭಾಗದ ಸಂಯೋಜಕ ಪ್ರೊ. ತಿಮ್ಮಣ್ಣ ಜಿ. ಭಟ್ ಹಾಗೂ ಪದವಿವಿಭಾಗದ ಮುಖ್ಯಸ್ಥರಾದ ಡಾ. ಉದಯ ಶೆಟ್ಟಿ ಕೆ. ಈ ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಶ್ರೀಮತಿ ಮೇವಿ ಮಿರಾಂದ ವಂದಿಸಿದರು.