ಹಿಜಾಬ್ ನ ನೆಪದಲ್ಲಿ ಜಿಲ್ಲೆಯ ಶಾಂತಿಯನ್ನು ಕದಡುವ ಹುನ್ನಾರ~ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ

ಉಡುಪಿ: ಹಿಜಾಬ್ ನ ನೆಪದಲ್ಲಿ ಉಡುಪಿಯ ಜಿಲ್ಲೆಯ ಶಾಂತಿಯನ್ನು ಕದಡುವ ಹುನ್ನಾರವನ್ನು ಕೆಲವು ಮತೀಯವಾದದ ಸಂಘಟನೆಗಳು ನಡೆಸುತ್ತಿರುವುದು ಖಂಡನೀಯ. ಜವಾಬ್ದಾರಿಯುತ ನಾಗರಿಕರು ಕಾಲೇಜಿನಲ್ಲಿ ವಸ್ತ್ರ ಸಂಹಿತೆಯನ್ನು ಹೊರತು ಪಡಿಸಿ ಧಾರ್ಮಿಕ ಪರಂಪರೆಯನ್ನು ಅನುಸರಿಸುವುದನ್ನು ಒಪ್ಪುವುದಿಲ್ಲ.

ಈ ಹಿನ್ನೆಲೆಯಲ್ಲಿ ಸರಕಾರ ಶೀಘ್ರ ಕ್ರಮ ಕೈಗೊಂಡು ವಸ್ತ್ರಸಂಹಿತೆಯನ್ನು ಜಾರಿಗೆ ತಂದಿರುವುದು ಸ್ವಾಗತರ್ಹ ಎಂದು ಬಿಜೆಪಿ ಮುಖಂಡ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಪ್ರತಿಕ್ರಿಯಿಸಿದ್ದಾರೆ

ಈಗಾಗಲೇ ಕುಂದಾಪುರದಲ್ಲಿ ಮಾರಕಾಸ್ತ್ರ ಹಿಡಿದು ತಿರುಗುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಹಿಂದೂ ಮುಂಖಂಡರು ಮತ್ತು ಕಾರ್ಯಕರ್ತರ ಹತ್ಯೆಗೆ ಸಂಚು ಮಾಡಿರುವುದು ಬೆಳಕಿಗೆ ಬಂದಿದೆ. ಹಿಜಾಬ್ ಅನ್ನು ಮುಂದಿಟ್ಟುಕೊಂಡು ಕರಾವಳಿಯ ಉಭಯ ಜಿಲ್ಲೆಯ ಶಾಂತಿಯನ್ನು ಕದಡುವ ಯತ್ನವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ.

ಜಿಲ್ಲೆಯ ಜನತೆ, ಹಿಂದೂ ಮುಖಂಡರು, ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು ಎಂದು ವಿನಂತಿಸಿದ್ದಾರೆ.

 
 
 
 
 
 
 
 
 
 
 

Leave a Reply