ತೆಂಕನಿಡಿಯೂರು ಕಾಲೇಜು : ಎಂ.ಎಸ್.ಡಬ್ಲ್ಯೂ ವಿಭಾಗದ ಶೈಕ್ಷಣಿಕ ಭೇಟಿ

ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು,ಉಡುಪಿ ಇಲ್ಲಿಯ ಎಂ.ಎಸ್.ಡಬ್ಲ್ಯೂ. ವಿಭಾಗದ ಶೈಕ್ಷಣಿಕ ಅಧ್ಯಯನ ಭೇಟಿಯ ಪ್ರಯುಕ್ತ ಮಂಗಳೂರಿನ ಕುಲಶೇಖರದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಡೇರಿ ಘಟಕಕ್ಕೆ ಭೇಟಿ ನೀಡಲಾಯಿತು.

ಸಂಸ್ಥೆಯ ಮಹೇಶ್ ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಬಳಿಕ ಮಂಗಳೂರಿನ ಡೀಡ್ಸ್ ಸರಕಾರೇತಯರ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥ ಮರ್ಲಿನ್ ಮಾರ್ಟಿಸ್ ಸಂಸ್ಥೆಯ ಕಾರ್ಯನಿರ್ವಹಣೆಯ ಕುರಿತು ಮಾಹಿತಿ ನೀಡಿದರು.ಫಾದರ್ ಮುಲ್ಲರ್ ಆಸ್ಪತ್ರೆಯ ಸೈಕಿಯಾಟ್ರಿ ವಿಭಾಗಕ್ಕೆ ಭೇಟಿ ನೀಡಲಾಯಿತು. ಸಂಸ್ಥೆಯ ಜೀಟಾ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. 

ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಷ್ಮಾ ಟಿ. ವಿಭಾಗದ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ. ನಾಯಕ್, ಶ್ರೀಕಲಾ ಕುಮಾರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply