ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿ. ವ್ಯವಸ್ಥಾಪಕರ ಬೀಳ್ಕೊಡುಗೆ ಸಮಾರಂಭ

ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ ೩೭ ವರ್ಷ ಸೇವೆ ಸಲ್ಲಿಸಿದ ಶ್ರೀಮತಿ ಶಕುಂತಳರವರು ಇತ್ತೀಚೆಗೆ ವ್ಯವಸ್ಥಾಪಕರಾಗಿ ನಿವೃತ್ತಿಗೊಂಡ ಸಂಧರ್ಭದಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು. ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಚ್. ಜಯಪ್ರಕಾಶ್ ಕೆದ್ಲಾಯರವರು ಶ್ರೀಮತಿ ಶಕುಂತಳ ಹಾಗೂ ಶ್ರೀ ದಾಮೋದರ ದಂಪತಿಗಳನ್ನು ಸನ್ಮಾನಿಸಿದರು. ಉಪಾಧ್ಯಕ್ಷರಾದ ಶ್ರೀ ಪಿ. ರಾಘವೇಂದ್ರ ಭಟ್, ನಿರ್ದೇಶಕರಾದ ಶ್ರೀ ಪಿ.ಎನ್. ರವೀಂದ್ರ ರಾವ್, ಶ್ರೀ ಭಾಸ್ಕರ್ ರಾವ್ ಕಿದಿಯೂರು, ಶ್ರೀ ಎನ್. ಪ್ರಹ್ಲಾದ್ ಬಲ್ಲಾಳ್, ಶ್ರೀಮತಿ ಮನೋರಮಾ ಎಸ್., ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್. ಕುಮಾರಸ್ವಾಮಿ ಉಡುಪ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ವಿಷ್ಣುಮೂರ್ತಿ ಆಚಾರ್ಯ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply