ಎಮ್ಮೆಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್‌ಪ್ರೆಸ್!

ಗುಜರಾತ್‌ನ ವತ್ವಾ ರೈಲು ನಿಲ್ದಾಣದ ಬಳಿ  ಟ್ರ್ಯಾಕ್‌ನಲ್ಲಿ ವಂದೇ ಭಾರತ್ ಜಾನುವಾರುಗಳಿಗೆ ಡಿಕ್ಕಿ ಹೊಡೆದು ಹಾನಿಯಾಗಿದೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಬೆಳಗ್ಗೆ 11.15ರ ಸುಮಾರಿಗೆ ಈ ಘಟನೆಯು ನಡೆದಿದ್ದು, ಅಪಘಾತದಲ್ಲಿ ನಾಲ್ಕು ಎಮ್ಮೆಗಳು ಸಾನ್ನಪ್ಪಿವೆ ಎಂದು ತಿಳಿದು ಬಂದಿದೆ.

ವತ್ವಾ ಬಳಿಯ ಹಾದಿಯಲ್ಲಿ ಮುಂದೆ ಕಾಣಿಸದಂತಹ ಒಂದು ತಿರುವಿನ ಪ್ರದೇಶವಿದ್ದು, ರೈಲು ಈ ವೇಳೆಯಲ್ಲಿ ಸುಮಾರು 100 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತಿತ್ತು. ಹೀಗಾಗಿ ಎಮ್ಮೆಗೆ ರೈಲು ಡಿಕ್ಕಿ ಹೊಡೆದ ರಭಸಕ್ಕೆ ಫೈಬರ್‌ನಿಂದ ನಿರ್ಮಿಸಿರುವ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ರೈಲ್ವೆ ಇಲಾಖೆಯ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಹತ್ವಾಕಾಂಕ್ಷೆಯ ಯೋಜನೆ ಆಗಿದೆ. ಆದರೆ ಈ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಆರಂಭಿಸಿದ ಏಳು ದಿನದಲ್ಲೇ ಇಂಥದೊಂದು ಅಪಘಾತ ಸಂಭವಿಸಿದೆ. ಎಕ್ಸ್‌ಪ್ರೆಸ್ ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ರೈಲ್ವೆ ಇಲಾಖೆಯು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಲಾಗಿದೆ.

 
 
 
 
 
 
 
 
 
 
 

Leave a Reply