ಫೆ.20ರಂದು ತುಳುಕೂಟದ ನಾಟಕ ಪ್ರಶಸ್ತಿ ಪ್ರಧಾನ

ಉಡುಪಿ: ತುಳುಕೂಟ ಉಡುಪಿ ಇದರ 20ನೇ ಕೆಮ್ತೂರು ತುಳು ನಾಟಕ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭವು ಫೆ.20ರಂದು ಸಂಜೆ 5.30ಕ್ಕೆ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ. ಉಡುಪಿ ಶಾಸಕ ಕೆ.ರಘುಪತಿ ಭಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಪ್ರಮೋದ್ ಮಧ್ವರಾಜ. ಯು.ಎ.ಇ.ನ ತುಳವರ್ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಉದ್ಯಮಿ ಪಿ.ಪುರುಷೋತ್ತಮ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ.ವಿದಾಸ್‌ ಎಸ್‌.ನಾಯಕ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಾರೆ.

ಪ್ರಶಸ್ತಿ ಪ್ರದಾನದ ನಂತರ ಈ ಬಾರಿಯ ಕೆಮ್ತೂರು ತುಳು ನಾಟಕ ಪ್ರಶಸ್ತಿ ಪಡೆದ ಮಣಿಪಾಲದ ಸಂಗಮ ಕಲಾವಿದೆರ್ ಸೊರದಾಂತಿ ನಲಿಕೆ ನಾಟಕವನ್ನು ಪ್ರದರ್ಶಿಸಲಿದ್ದಾರೆ ಎಂದು ಕೆಮ್ತೂರು ನಾಟಕ ಸ್ಪರ್ಧೆಯ ಸಂಚಾಲಕ ಬಿ.ಪ್ರಭಾಕರ ಭಂಡಾರಿ ತಿಳಿಸಿದ್ದಾರೆ.

 
 
 
 
 
 
 
 
 

Leave a Reply