ತುಳುವೆರ್ ಕುಡ್ಲ (ರಿ). ನೂತನ ಸಂಘಟನೆಯ “ಲೊಗೊ”ವನ್ನು ಲೋಕಾರ್ಪಣೆಗೈದ ಬಸವರಾಜ್ ಬೊಮ್ಮಾಯಿ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯವರಾದ ಬಸವರಾಜ್ ಬೊಮ್ಮಾಯಿಯವರು ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ತುಳುವೆರ್ ಕುಡ್ಲ (ರಿ). ನೂತನ ಸಂಘಟನೆಯ “ಲೊಗೊ”ವನ್ನು ಉದ್ಘಾಟನೆಗೊಳಿಸಿ ಹಾಗೂ ತುಳು ಭಾಷೆಯನ್ನು ಕರ್ನಾಟಕ  ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಮಾಡಲು ಮನವಿ ಸಲ್ಲಿಸಲಾಯಿತು. 
“ತುಳು ಕೆಳಿಂಜ ಭಾರತ” ಎನ್ನುವ ತುಳುನಾಡಿಗೆ ಸಂಬಂಧಪಟ್ಟ ಪುಸ್ತಕವನ್ನು ಕೊಟ್ಟು ಮಾನ್ಯ ಮುಖ್ಯಮಂತ್ರಿಯವರನ್ನು ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಡಿ ವೇದವ್ಯಾಸ ಕಾಮತ್ ಹಾಗೂ ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಶ್ರೀ ಉಮಾನಾಥ್ ಕೋಟ್ಯಾನ್ ಸಂಘಟನೆಯ ಅಧ್ಯಕ್ಷ ಪ್ರತೀಕ್ ಯು ಪೂಜಾರಿ, ಕೋಶಾಧಿಕಾರಿ ಚರಿತ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರತೀಕ್ ರಾವ್, ಸಂಘಟನಾ ಸಂಚಾಲಕ ರೋಶನ್ ರೇನೊಲ್ಡ್, ಸಹ ಸಂಚಾಲಕ ಕುಷಿತ್, ವರುಣ್ ಆಚಾರ್ಯ ಉಪಸ್ಥಿತರಿದ್ದರು. 
 
 
 
 
 
 
 
 
 
 
 

Leave a Reply