ಶ್ರೀಕೃಷ್ಣಮಠದಲ್ಲಿ,ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ,ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾ ಮಂಡಲ(ರಿ) ಉಡುಪಿ ಇದರ ಅಂಗಸಂಸ್ಥೆ ತುಷಿಮಾಮ ಕಡಿಯಾಳಿ ಇವರ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾ ಸಭಾ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಬ್ರಾಹ್ಮಣ ವಲಯ ಹಾಗೂ ಬ್ರಾಹ್ಮಣ ಬಂಧುಗಳ ಸಹಕಾರದೊಂದಿಗೆ ಪೊಡವಿಗೊಡೆಯ ಶ್ರೀಕೃಷ್ಣನಿಗೆ ವಿಷ್ಣುಸಹಸ್ರ ನಾಮಾವಳಿ ಸಹಿತ “ಕೋಟಿ ತುಳಸಿ ಅರ್ಚನೆ” ಯನ್ನುಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾ ಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು,ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನೆರವೇರಿಸಿ ಅನುಗ್ರಹಿಸಿದರು.