ಉಡುಪಿ : ಆರೋಗ್ಯ ಮಾಹಿತಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ಪೇತ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ ಆರೂರು ಇಲ್ಲಿ ಆರೋಗ್ಯ ಮಾಹಿತಿ ಜಾಗೃತಿ ಕಾರ್ಯಕ್ರಮಕ್ಕೆ ಮಾನ್ಯ ಆರೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗುರುರಾಜ ರಾವ್ ಫೆ.1ರಂದು ಚಾಲನೆ ನೀಡಿದರು.

 ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಗಣೇಶ ಗಂಗೊಳ್ಳಿ ಹಾಗೂ ಬಳಗದವರ ಸಹಯೋಗದೊಂದಿಗೆ ಜಾನಪದ ಹಾಡು ಹಾಗೂ ಅಭಿನಯದ ಮೂಲಕ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಯೋಜನೆಗಳು ಮತ್ತು ಸಾಂಕ್ರಾಮಿಕ ರೋಗದ ಮುಂಜಾಗ್ರತಾ ಕ್ರಮಗಳ ಕುರಿತು ಜನಪದ ಹಾಡು ಅಭಿನಯದ ಮೂಲಕ ಆರೋಗ್ಯ ಮಾಹಿತಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಶಾಲೆಯ ಪ್ರಾಂಶುಪಾಲರಾದ ಗಣೇಶ್, ವಾರ್ಡನ್ ಶ್ರೀಧರ್ ಶೆಟ್ಟಿ ಯೂಸುಫ್ ಸೈಯದ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply