ಮೊಗವೀರ ಭವನ: ಮಂಗಳೂರು ರಿಪೈನರೀಸ್ ಆಂಡ್ ಪೆಟ್ರೋಕೆಮಿಕಲ್ ಲಿಮಿಟೆಡ್ ನ ಸಿ ಎಸ್ ಆರ್ ನಿಧಿಯಿಂದ ಕೊಡಮಾಡಿದ ಅನುದಾನ ದೊಂದಿಗೆ ಹಾಗೂ ಮಹಾಜನ ಸಂಘದ ಮೊತ್ತವನ್ನು ಸೇರಿಸಿ ಸುಮಾರು 15ಕೋಟಿ ವೆಚ್ಚದ ಎರಡು ಸಭಾಂಗಣಗಳನ್ನೊಳಗೊ೦ಡ “ಮೊಗವೀರ ಭವನ” ನಿರ್ಮಿಸಲಾಗಿದೆ.
ಇದೀಗ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಕಾರ್ಯಗಳು ಸಂಪನ್ನಗೊ೦ಡಿದ್ದು ಶಿಲೆದಾರು ಶಿಲ್ಪಗಳಿಂದ ಕೂಡಿದ ದೇವಾಲಯದಲ್ಲಿ ಶ್ರೀ ಪ್ರಸನ್ನ ಗಣಪತಿ, ಶ್ರೀ ಭದ್ರಕಾಳಿ, ಶ್ರೀ ನಾಗದೇವರ ಸಹಿತ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬ ಪುನರ್ ಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವಗಳನ್ನೊಳಗೊ೦ಡ ವೈಧಿಕ ವಿಧಿ ವಿಧಾನಗಳನ್ನು ಎಪ್ರಿಲ್ 1 ರಿಂದ ಎಪ್ರಿಲ್ 15 ರವರೆಗೆ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಶ್ರೀ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ, ಹಿರಿಯ ಅರ್ಚಕರಾದ ವೆಂಕಟನರಸಿ೦ಹ ಉಪಾಧ್ಯಾಯ ಹಾಗೂ ರಾಘವೇಂದ್ರ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಮತ್ತು ಯತಿವರೇಣ್ಯರ ಶುಭಾಶೀರ್ವಾದಗಳೊಂದಿಗೆ ವೈಭವೋಪೇತವಾಗಿ ನಡೆಸಲು ಸಂಕಲ್ಪಿಸಲಾಗಿದೆ.
ಪ್ರಮುಖ ಧಾರ್ಮೀಕ ಕಾರ್ಯಕ್ರಮಗಳು: ಹೊರೆಕಾಣಿಕೆ: ರಾಜ್ಯ ಹಾಗೂ ಹೊರರಾಜ್ಯಗಳಿಂದ 2 ರಿಂದ 3ಲಕ್ಷದಷ್ಟು ಭಕ್ತಾಧಿಗಳು ಆಗಮಿಸುವ ನಿರೀಕ್ಷೆಯಿದ್ದು ಆಗಮಿಸುವ ಎಲ್ಲಾ ಭಕ್ತಾಧಿಗಳಿಗೂ ದಿನಂಪ್ರತಿ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಪ್ರಯುಕ್ತ ಮಾರ್ಚ್ 27ಕ್ಕೆ ಅವಿಭಜಿತ ದ. ಕ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಿಂದ ಪ್ರಸಾದದ ರೂಪದಲ್ಲಿ ಹೊರೆಕಾಣಿಕೆಯು ಕ್ಷೇತ್ರವನ್ನು ತಲುಪಲಿದೆ. ಈಗಾಗಲೇ ಹೈದ್ರಾಬಾದ್ ಕರ್ನಾಟಕ ಸೇರಿದಂತೆ ರಾಜ್ಯದ ಇತರ ಭಾಗಗಳಿಂದ ಹೊರೆಕಾಣಿಕೆಗಳು ದೇವಸ್ಥಾನಕ್ಕೆ ತಲುಪಿದೆ.
ಅನ್ನ ಛತ್ರ ಹಾಗೂ ಪಾರ್ಕಿಂಗ್: ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ನೂಕು ನುಗ್ಗಲಾಗದಂತೆ ಸುಮಾರು 1ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಅನ್ನಛತ್ರದ ಚಪ್ಪರ ನಿರ್ಮಿಸಿ ಎಲೆ ಊಟ ಮತ್ತು ಬಫೆ ಊಟಕ್ಕೆ ಅನುಕೂಲವಾಗುವಂತೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಹಾಗೂ ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳ ವಾಹನ ನಿಲುಗಡೆಗೆ ಬೇಕಾಗುವಷ್ಟು ಪಾರ್ಕಿಂಗ್ ಜಾಗದ ಸಿದ್ದತೆ ಮಾಡಿಕೊಳ್ಳಲಾಗಿದೆ.
ರಾಜಗೋಪುರ ಹಾಗೂ ಲಕ್ಷ್ಮೀ ತೀರ್ಥ ಕೆರೆ ಉದ್ಘಾಟನೆ ಎಪ್ರಿಲ್ 1: ನೂತನವಾಗಿ ನಿರ್ಮಾಣಗೊಂಡ ಭವ್ಯ ರಾಜಗೋಪುರ ಹಾಗೂ ಸರಕಾರದ ಅನುಧಾನದೊಂದಿಗೆ ನಿರ್ಮಾಣಗೊಂಡ ಲಕ್ಷ್ಮೀ ತೀರ್ಥ ಕೆರೆಯು ಎಪ್ರಿಲ್ 1ರ ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ದಿನಂಪ್ರತಿ ಕುಂಕುಮಾರ್ಚನೆಯೊ೦ದಿಗೆ ಮಹಾಮಂಗಳಾರತಿ : ಎಪ್ರಿಲ್ 2ರಿಂದ ಎಪ್ರಿಲ್ 15ರತನಕ ಪ್ರತೀದಿನ ಸಂಜೆ ಗಂಟೆ 4ರಿಂದ 5ರವರೆಗೆ ಸಾವಿರ ಸುಮಂಗಲೆಯರಿ0ದ ಕುಂಕುಮಾರ್ಚನೆಯೊoದಿಗೆ ಮಹಾಮಂಗಳಾರತಿ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದೆ.
ಮಹಾಲಕ್ಷ್ಮೀ ದೇವಿಯ ಬಿಂಬ ಪ್ರತಿಷ್ಠೆ , ಸ್ವರ್ಣಕಲಶ ಪ್ರತಿಷ್ಠೆ ಹಾಗೂ ಮಹಾ ಅನ್ನಸಂತರ್ಪಣೆ ಎಪ್ರಿಲ್ 6ರಂದು ನಡೆಯಲಿದೆ.
ವಾರ್ಷಿಕ ರಥೋತ್ಸವ :ವರ್ಷಂಪ್ರತಿ ನಡೆಯುವ ಶ್ರೀ ಮಹಾಲಕ್ಷ್ಮೀ ರಥೋತ್ಸವ ಹಾಗೂ ಮಹಾ ಅನ್ನಸಂತರ್ಪಣೆಯು ಎಪ್ರಿಲ್ 13ರಂದು ನಡೆಯಲಿದೆ.
ನಿರ೦ತರ15ದಿನಗಳ ಪರ್ಯಂತ ಧಾರ್ಮಿಕ ಸಭಾಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ, ಶ್ರೀ ಸಿದ್ಧರಾಮಯ್ಯ, ಶ್ರೀ ಹೆ ಚ್ ಡಿ ಕುಮಾರಸ್ವಾಮಿ, ಸಂಸದರುಗಳಾದ ಶ್ರೀನಳಿನ್ ಕುಮಾರ್ ಕಟೀಲ್ , ಶೋಭಾಕರಂದ್ಲಾಜೆ , ರಾಜ್ಯದ ಹಾಲಿ ಹಾಗೂ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ರಾಜಕೀಯ ಮುಖಂಡರುಗಳು ಭಾಗವಹಿಸಲಿದ್ದಾರೆ. ವಿವಿಧ ಮಠಾಧೀಶರುಗಳು ಮತ್ತು ಧಾರ್ಮಿಕ ಮುಖಂಡರುಗಳು ಆಶೀರ್ವಚನ ನೀಡಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಾರತ ಸರಕಾರ ಪ್ರಸ್ತುತ ಪಡಿಸುವ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಾಂಜವೂರು ಇವರು ಸಾದರ ಪಡಿಸುವ 20ರಾಜ್ಯಗಳ ಕಲಾವಿದರುಗಳ ಸಾಂಸ್ಕೃತಿಕ ಉತ್ಸವ ಏರ್ಪಡಿಸಲಾಗಿದೆ. ರಾಜ್ಯದ ಹಾಗೂ ಸ್ಥಳೀಯ ಕಲಾವಿದರುಗಳಿಂದ ಪ್ರತೀ ದಿನ ಸಂಜೆ ನೃತ್ಯ ವೈವಿಧ್ಯ, ಯಕ್ಷಗಾನ , ನಾಟಕ ಮುಂತಾದ ಕಾರ್ಯಕ್ರಮ ನಡೆಯಲಿದೆ ಮತ್ತು ಖ್ಯಾತ ಗಾಯಕರೂ, ಸಂಗೀತ ನಿರ್ದೇಶಕರೂ ಆದ ಗಾನಗಂಧರ್ವ ವಿಜಯ ಪ್ರಕಾಶರವರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತೀದಿನ ಪೂರ್ವಾಹ್ನ ಗಂಟೆ 11.30 ರಿಂದ ರಾಜ್ಯದ ಖ್ಯಾತ ಕಲಾವಿದರುಗಳಿಂದ ಭಕ್ತಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.