ಉಡುಪಿ ಜಿಲ್ಲೆ 25 ವರ್ಷ ಪೂರೈಸಿದ ಹಿನ್ನೆಲೆ ಆಗಸ್ಟ್ 25 ರಂದು ರಜತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ಗೌರವಾನ್ವಿತ ರಾಜ್ಯಪಾಲರ ಆಗಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಗರದಲ್ಲಿ ಸಾರ್ವಜನಿಕರ ಸುಗಮ ಸಂಚಾರದ ವ್ಯವಸ್ಥೆಯಲ್ಲಿ ಈ ಕೆಳಕಂಡಂತೆ ಬದಲಾವಣೆ ಮಾಡಲಾಗಿದೆ.
ಅಜ್ಜರಕಾಡು ಮೈದಾನದ ಮುಂಭಾಗಕ್ಕೆ ಜಿಲ್ಲಾಡಳಿತದಿಂದ ನೀಡಲಾದ ಪಾಸ್ ಇರುವ ವಿಐಪಿ ವಾಹನಗಳಿಗೆ ಪುರಭವನದ ಪಕ್ಕದ ರಸ್ತೆಯಲ್ಲಿ, ಕಾರ್ಯಕ್ರಮಕ್ಕೆ ಆಗಮಿಸುವ ಕುಂದಾಪುರ, ಮಲ್ಪೆ, ಕಾಪು ಹಾಗೂ ಪಡುಬಿದ್ರೆ ಕಡೆಯಿಂದ ಆಗಮಿಸುವ ಸಾರ್ವಜನಿಕರ ವಾಹನಗಳಿಗೆ ಸೈಂಟ್ ಸಿಸಿಲಿ ಶಾಲೆಯ ಮೈದಾನದಲ್ಲಿ, ಅಲೆವೂರು, ಮೂಡುಬೆಳ್ಳೆ, ಮಣಿಪಾಲ ಹಾಗೂ ಕಾರ್ಕಳ ಕಡೆಯಿಂದ ಬರುವ ವಾಹನಗಳಿಗೆ ಮಿಷನ್ ಕಂಪೌಂಡ್ ಬಳಿಯ ಕ್ರಿಶ್ಚಿಯನ್ ಶಾಲಾ ಮೈದಾನ ಹಾಗೂ ಕ್ರಿಶ್ಚಿಯನ್ ಪಿ.ಯು ಕಾಲೇಜಿನ ಮೈದಾನದಲ್ಲಿ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ.