ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ವೃತ್ತಗಳಿಗೆ ನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಪುರಸಭೆಗಳ ಅಧಿನಿಯಮ 1964, 211ರ ಅನ್ವಯ ನಾಮಕರಣ ಮಾಡಲು ಸರ್ಕಾರ ಅನುಮತಿ ನೀಡಿ ಆದೇಶಿಸಿದೆ.
ಉಡುಪಿ ನಗರಸಭಾ ವ್ಯಾಪ್ತಿಯ ಬನ್ನಂಜೆ ಸರ್ಕಲ್ ಗೆ “ನಾರಾಯಣಗುರು ವೃತ್ತ”, ಕಲ್ಸಂಕ ವೃತ್ತಕ್ಕೆ “ಮಧ್ವಾಚಾರ್ಯ ವೃತ್ತ”, ಡಯಾನಾ ಸರ್ಕಲ್ ಗೆ “ವಾದಿರಾಜ ವೃತ್ತ”, ಸಂತೆಕಟ್ಟೆ ಕಲ್ಯಾಣಪುರ ರಸ್ತೆ ಜಂಕ್ಷನ್ ಗೆ “ಕೋಟಿ – ಚೆನ್ನಯ್ಯ ವೃತ್ತ”, ಬ್ರಹ್ಮಗಿರಿ ದೊಡ್ಡ ಸರ್ಕಲ್ ಗೆ “ಆಸ್ಕರ್ ಫೆರ್ನಾಂಡಿಸ್ ಸರ್ಕಲ್” ಹಾಗೂ ಪರ್ಕಳದಿಂದ ಕೋಡಂಗೆ ಹಾಗೂ ಕೋಡಂಗೆಯಿಂದ ಸರಳಬೆಟ್ಟುಗೆ ಹಾದುಹೋಗುವ ಮಧ್ಯದಲ್ಲಿರುವ ವೃತ್ತಕ್ಕೆ “ಶ್ರೀರಾಮ ವೃತ್ತ” ಎಂದು ನಾಮಕರಣ ಮಾಡಲು ಆದೇಶಿಸಲಾಗಿದೆ.
ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಬರುವ ವೃತ್ತ ಹಾಗೂ ಜಂಕ್ಷನ್ ಗಳಿಗೆ ಮಹಾಪುರುಷರ ಹಾಗೂ ಗಣ್ಯವ್ಯಕ್ತಿಗಳ ಹೆಸರುಗಳನ್ನು ಪದನಾಮಕರಣ ಮಾಡುವಂತೆ ಸಾರ್ವ ಜನಿಕರು, ಸಂಘ ಸಂಸ್ಥೆಗಳು ಸಲ್ಲಿಸಿರುವ ಮನವಿಯಂತೆ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಪದನಾಮಕರಣ ಮಾಡುವ ಬಗ್ಗೆ ಚರ್ಚಿಸಿ ನಿರ್ಣಯಿಸಿ ತೀರ್ಮಾನ ಕೈಗೊಳ್ಳಲಾಗಿ ರುತ್ತದೆ.