ಸೆ.9: ಆತ್ಮಹತ್ಯೆ ವಿಷಯದ ಕುರಿತು ಪತ್ರಕರ್ತರಿಗೆ ಕಾರ್ಯಾಗಾರ

ಭಾರತೀಯ ಮನೋವೈದ್ಯರ ಸೊಸೈಟಿ ಕರ್ನಾಟಕ ಶಾಖೆ ಮತ್ತು ಉಡುಪಿ ಹಾಗೂ ಮಂಗಳೂರು ಮನೋವೈದ್ಯರ ಸೊಸೈಟಿಯ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆತ್ಮಹತ್ಯೆಗೆ ಕಾರಣ, ಮಾನಸಿಕ ಅಂಶಗಳು, ಆರ್ಥಿಕ ಮತ್ತು ಸಾಮಾಜಿಕ ಕಾರಣ, ಪತ್ರಿಕಾ ವರದಿ ಕುರಿತು ಉಡುಪಿ ಜಿಲ್ಲೆಯ ಪತ್ರಕರ್ತರಿಗೆ ಒಂದು ದಿನದ ಕಾರ್ಯಾಗಾರವನ್ನು ಸೆ.9ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಪತ್ರಕರ್ತರು ಭಾಗವಹಿಸಬೇಕಾಗಿ ವಿನಂತಿ. ಅದೇ ರೀತಿ ಈ ಕಾರ್ಯಾಗಾರದಲ್ಲಿ ವಿವಿಧ ಕಾಲೇಜುಗಳ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಸೂಚನೆ

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಸದಸ್ಯತ್ವ ಕಾರ್ಡ್ ವಿತರಿಸಲಾಗುತ್ತದೆ. ಆದುದರಿಂದ ಜಿಲ್ಲೆಯ ಎಲ್ಲ ತಾಲೂಕುಗಳ ಪತ್ರಕರ್ತರು ಕಡ್ಡಾಯವಾಗಿ ಈ ಕಾರ್ಯಕ್ರಮಕ್ಕೆ ಆಗಮಿಸಿ ಸಹಿ ಹಾಕಿ ಸ್ವತಃ ತಾವೇ ಕಾರ್ಡ್ ಪಡೆದುಕೊಳ್ಳಬೇಕು.

 
 
 
 
 
 
 
 
 
 
 

Leave a Reply