ಕಾನೂನು ಅರಿವು ಮತ್ತು ನೆರವು ಶಿಬಿರ

ದಿನಾಂಕ 10/09/2022 ರಂದು ನಡೆದ ಕಾನೂನು ಅರಿವು ಮತ್ತು ನೆರವು ಶಿಬಿರದ ಉದ್ಘಾಟನಾ ಸಮಾರಂಭವು ಚಿತ್ತಾರಿ ಮಹಾಬಲೇಶ್ವರ ದೇವಸ್ಥಾನ ಜಾತಬೆಟ್ಟು, ಉಪ್ಪೂರು ಇಲ್ಲಿ ಶ್ರೀ ಶಾಂತವೀರ್ ಶಿವಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾರಂಭಕ್ಕೆ ಆಗಮಿಸಿದ ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ಬಿ. ವೀರಪ್ಪರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ಗೌರವ ಅತಿಥಿಯರಾದ ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ಆರ್. ಗುರುರಾಜನ್ ಅವರು ಪೋಷಣ ಅಭಿಯಾನ ಸ್ಟಾಲ್ ನ್ನು ವೀಕ್ಷಿಸುವುದರ ಜೊತೆಗೆ ಸ್ಟಾಲ್ ನಲ್ಲಿರುವ ಪಾನೀಯವನ್ನು ಕುಡಿದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಪೌಷ್ಟಿಕತೆ ಬಗ್ಗೆ ಹೆಚ್ಚಿನ ಗಮನ ನೀಡುವ ನಿಟ್ಟಿನಲ್ಲಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ಸದರಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ ಉಡುಪಿ, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply