ಉಡುಪಿ ಶ್ರೀಕೃಷ್ಣ ಮಠಕ್ಕೆ ಶೋಭಾ ಕರಂದ್ಲಾಜೆ ಭೇಟಿ

ಉಡುಪಿ  : ಶ್ರೀ ಕೃಷ್ಣಮಠಕ್ಕೆ ಭಾರತದ ಪ್ರಧಾನಮಂತ್ರಿಯ ಜನಾಶೀರ್ವಾದ ಯಾತ್ರೆಯ ಸಲುವಾಗಿ ಉಡುಪಿಗೆ ಆಗಮಿಸಿದ ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ರಾಜಾಂಗಣದ ಶ್ರೀ ನರಹರಿತೀರ್ಥ ವೇದಿಕೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರ್ಯಾಯ ಶ್ರೀಪಾದರು ಅನುಗ್ರಹಿಸಿದರು.

ಈ ಸಂದರ್ಭದಲ್ಲಿ ಜನಾಶೀರ್ವಾದ ಯಾತ್ರೆಯ ಕರ್ನಾಟಕ ರಾಜ್ಯದ ಉಸ್ತುವಾರಿ ಎಂ.ಎಲ್.ಸಿ ಮುನಿರಾಜು ಮತ್ತು ಉಡುಪಿ ಶಾಸಕ ರಘುಪತಿ ಭಟ್,ಉಡುಪಿ ಬಿ.ಜೆ.ಪಿ.ಜಿಲ್ಲಾಧ್ಯಕ್ಷ ಸುರೇಶ ನಾಯಕ್,ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply