ಉಡುಪಿ : ಕಳೆದ ಒಂದು ತಿಂಗಳಿನಿಂದ ರಾಜ್ಯಾದ್ಯಂತ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಮುಷ್ಕರವನ್ನು ಬೆಂಬಲಿಸಿ, ಉಡುಪಿ ಜಿಲ್ಲೆಯ ಅತಿಥಿ ಉಪನ್ಯಾಸಕರು ಸಿ ಎಂ ಬಸವರಾಜ್ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಮುಖವಾಡ ಹಾಕಿ, ಬೂಟ್ ಪಾಲೀಶ್, ಟೀ ಮಾರಾಟ, ಕಸ ಗುಡಿಸುವ ಅಣುಕು ಪ್ರದರ್ಶನ ಮಾಡಿ, ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಸಂಬಳ, ಭತ್ತೆ ಹೆಚ್ಚಳ ಮಾಡುವಂತೆ ಸರ್ಕಾರವನ್ನು ಆಗ್ರಹಿಸಲಾಯಿತು.