ಉಳ್ಳೂರು – 74 : ಬಿಜೆಪಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ

ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ ದಿನವನ್ನು ಉಳ್ಳೂರಿನ ಬಿಜೆಪಿ ಶಕ್ತಿ ಕೇಂದ್ರ ಕಛೇರಿಯಲ್ಲಿ ಆಚರಿಸಲಾಯಿತು.

ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು.

ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ, ಹೋರಾಟಗಳು ಮತ್ತು ಬಲಿದಾನದ ಕುರಿತು ಉಡುಪಿ ಜಿಲ್ಲಾ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಸ್ಟ ಸಂಚಾಲಕ ಚಿಟ್ಟೆ ರಾಜಗೋಪಾಲ ಹೆಗ್ಡೆ ಮಾತನಾಡಿದರು.

ಈ ಸಂದರ್ಭದಲ್ಲಿ ಜಿ.ಪ. ಮಾಜಿ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಗ್ರಾ.ಪ.ಅಧ್ಯಕ್ಷ ರಾಜೇಶ್ ಹೆಬ್ಬಾರ್,ಶಕ್ತಿ ಕೇಂದ್ರ ಅಧ್ಯಕ್ಷ ಜಯರಾಮ ಶೆಟ್ಟಿ, ಮಾಜಿ ಅಧ್ಯಕ್ಷ ಪ್ರಸಾದ್ ಶೆಟ್ಟಿ,ಟೈಲರ್ ರಾಮಣ್ಣ,ಶಿವಶಂಕರ, ಶ್ರೀಕಾಂತ್ ನಾಯಕ್ ಹಾಗೂ ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply