​ಉಡುಪಿ ಸೇರಿ ​ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಕಾರಣ ಉಡುಪಿ, ಶಿವಮೊಗ್ಗ ಸೇರಿದಂತೆ ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.

ಉತ್ತರಕನ್ನಡ, ಬೆಳಗಾವಿ, ಮಂಡ್ಯ,ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಬೆಳಿಗ್ಗೆ 5ರಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಶನಿವಾರ ಮುಖ್ಯಮಂತ್ರಿಗಳು ಅವಕಾಶ ಕಲ್ಪಿಸಿದ್ದರು.

 
 
 
 
 
 
 
 
 
 
 

Leave a Reply