ಯೋಗಿ ಪ್ರಮಾಣವಚನ ಪೇಜಾವರ ಶ್ರೀಗಳಿಗೆ ಆಹ್ವಾನ

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಲಕ್ನೋ ದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ ಪದಗ್ರಹಣಗೈಯಲಿರುವರು .

ಈ ಸಮಾರಂಭದಲ್ಲಿ ಉಪಸ್ಥಿತರಿರುವಂತೆ ಯೋಗಿಯವರು ಪೇಜಾವರ ಶ್ರೀ ವಿಶ್ಬಪ್ರಸನ್ನತೀರ್ಥ ಶ್ರೀಪಾದರನ್ನೂ ಆಹ್ವಾನಿಸಿದ್ದಾರೆ . ಅದರಂತೆ ಶ್ರೀಗಳು ಗುರುವಾರ ಚೆನ್ನೈ ಯಲ್ಲಿ ಕಾರ್ಯಕ್ರಮಗಳನ್ನು ಮುಗಿಸಿ ಶುಕ್ರವಾರ ಬೆಳಿಗ್ಗೆ ಚೆನ್ನೈಯಿಂದ ವಿಮಾನದ ಮೂಲಕ ಲಕ್ನೋ ತಲುಪಿ ಸಮಾರಂಭದಲ್ಲಿ ಭಾಗವಹಿಸುವರು ಎಂದು ಮಠದ ಪ್ರಕಟಣೆ ತಿಳಿಸಿದೆ .

 
 
 
 
 
 
 
 
 
 
 

Leave a Reply