ಯು.ಪಿ.ಎಂ.ಸಿ- ವಾರ್ಷಿಕ ಕ್ರೀಡಾಕೂಟ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ 32ನೇಯ ವಾರ್ಷಿಕ ಕ್ರೀಡಾಕೂಟವು ಜನವರಿ 13ರಂದು ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು. ಉಡುಪಿಯ ಲೆಕ್ಕಪರಿಶೋಧಕರಾದ ಹಾಗೂ ಕ್ರೀಡಾ ಕೌಶಲವನ್ನು ಹೊಂದಿರುವ ಸಿಎ ನಾಗರಾಜ್ ಭಟ್ ಇವರು ಕ್ರೀಡಾಕೂಟವನ್ನು ಉದ್ಘಾಟಿಸಿ ದಿನನಿತ್ಯದ ಚಟುವಟಿಕೆಗಳೊಂದಿಗೆ ಕ್ರೀಡೆಯನ್ನು ಮೈಗೂಡಿಸಿಕೊಂಡಾಗ ಸ್ವಾಸ್ಥ್ಯ, ಶಾಂತಿ, ನೆಮ್ಮದಿಯ ಬದುಕನ್ನು ಕಾಣಬಹುದು ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯರಾದ ಡಾ. ಮಧುಸೂದನ್ ಭಟ್ ಅಧ್ಯಕ್ಷರಾಗಿದ್ದರು. ಉಪ ಪ್ರಾಂಶುಪಾಲೆ ಶ್ರೀಮತಿ ಆಶಾ ಕುಮಾರಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಗಣೇಶ್ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೃತೀಯ ಬಿಬಿಎ ನ ಶ್ರೇಯಾ ಮತ್ತು ಕಿಶನ್ ಕ್ರೀಡಾವಿಧಿ ಬೋಧಿಸಿದರು. ಅಶ್ವಿಕಾ ತೃತೀಯ ಬಿ.ಕಾಂ ಸ್ವಾಗತಿಸಿದರು, ತೃತೀಯ ಬಿಬಿಎ ನ ಶೋಭಿತ್ ನಾಯಕ್ ವಂದಿಸಿದರು, ಯಶ್ವಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

 
 
 
 
 
 
 
 
 
 
 

Leave a Reply