ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿನ ನೌಕರರ ವತಿಯಿಂದ ಸಂತೆಕಟ್ಟೆಯ ಕೃಷ್ಣಾನುಗ್ರಹ ಅನಾಥಾಶ್ರಮಕ್ಕೆ ಸಹಾಯ ಧನ ಹಸ್ತಾಂತರ

ಉಡುಪಿ ಸಂತೆಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಅನಾಥ ಮಕ್ಕಳ ಬಾಳಿನ ಆಶಾಕಿರಣವಾದ ಕೃಷ್ಣಾನುಗ್ರಹ ಅನಾಥಾಶ್ರಮದ ಮಕ್ಕಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಕೊರೋನಾ ಸಂಕಷ್ಟ ಕಂಡುಬಂದ ಹಿನ್ನೆಲೆಯಲ್ಲಿ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿನ ನೌಕರರ ವತಿಯಿಂದ ಔಷದ ಮತ್ತು ಇತರ ಅಗತ್ಯ ವಸ್ತುಗಳ ಖರೀದಿ ಬಗ್ಗೆ ಸಹಾಯಧನ ವಿತರಿಸಲಾಯಿತು.
ನೌಕರ ವೃಂದದ ಪರವಾಗಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ಎಸ್. ಕುಮಾರ ಸ್ವಾಮಿ ಉಡುಪರವರು ಅನಾಥಾಶ್ರಮದ ಆಡಳಿತ ಅಧಿಕಾರಿಯಾದ ಶ್ರೀ ಉದಯ್ ಕುಮಾರ್‌ರವರಿಗೆ ಚೆಕ್ಕನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ಪಿ. ವಿಷ್ಣುಮೂರ್ತಿ ಆಚಾರ್ಯ, ವ್ಯವಸ್ಥಾಪಕರಾದ ಶ್ರೀ ನಾರಾಯಣ್ ಕೆ.ಹಾಗೂ ಮುಖ್ಯ ಸಲಹೆಗಾರರಾದ ಶ್ರೀ ಬಿ. ರಂಗನಾಥ ಸಾಮಗರವರು ಉಪಸ್ಥಿತರಿದ್ದರು.
 
 
 
 
 
 
 
 
 

Leave a Reply