ಕೇ೦ದ್ರ ಸರ್ಕಾರವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಯೋಜನೆ ಯನ್ನುಹಮ್ಮಿಕೊಂಡಿದ್ದು ಇದರ ಅಂಗವಾಗಿ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿ. ತನ್ನ ಗ್ರಾಹಕರಿಗೆ ರಾಷ್ಟ್ರಧ್ವಜ ವಿತರಿಸಿ ಅಗಸ್ಟ್ 13ರಿಂದ ಅಗಸ್ಟ್ 15ರವರೆಗೆ ತಮ್ಮ ತಮ್ಮ ಮನೆಗಳಲ್ಲಿ ಹಾರಿಸಿ ಅಭಿಯಾನದಯಶಸ್ವಿಗೊಳಿಸಲು ಮನವಿ ಮಾಡಲಾಯಿತು.
ಹಿರಿಯ ಗ್ರಾಹಕರಾದ ಶ್ರೀ ಪ್ರಭಾಕರ ಶಾನುಭಾಗ್ ಕೆ.ಯವರಿಗೆ ಹಾಗೂ ಇತರ ಗ್ರಾಹಕರಿಗೆ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಚ್. ಜಯಪ್ರಕಾಶ್ ಕೆದ್ಲಾಯವರು. ರಾಷ್ಟ್ರಧ್ವಜವನ್ನು ವಿತರಿಸಿದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಪಿ. ವಿಷ್ಣುಮೂರ್ತಿ ಆಚಾರ್ಯ, ಸಹಾಯಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಶ್ರೀ ಎ. ರಾಘವೇಂದ್ರ ಹೆಬ್ಬಾರ್, ಮುಖ್ಯ ಸಲಹೆಗಾರರಾದ ಶ್ರೀ ಎಸ್. ಕುಮಾರಸ್ವಾಮಿ ಉಡುಪ, ಲೆಕ್ಕ ಪರಿಶೋಧಕರಾದ ಶ್ರೀ ಕೆ. ಗಣೇಶ್ ಹೆಬ್ಬಾರ್, ಮಾಜಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ಬಿ. ರಂಗನಾಥ ಸಾಮಗರವರು ಉಪಸ್ಥಿತರಿದ್ದರು.