ಬಿವಿಟಿ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ

ಉಡುಪಿ :- ಉಡುಪಿ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಟ, ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ ಮತ್ತು ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲದ ವತಿಯಿಂದ ಬಿವಿಟಿ ಆವರಣದಲ್ಲಿ ಆದಿತ್ಯವಾರ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ ಮಾತನಾಡಿ,ಈ ಕೋವಿಡ್ ಸಂದರ್ಭದಲ್ಲಿ ನಾವು ಪರಿಸರಕ್ಕೆ ಪೂರಕವಾಗಿ ವರ್ತನೆ ಮಾಡಬೇಕಾದ ಅಗತ್ಯತೆಯಿದೆ. ಗಿಡಗಳನ್ನು ಬೆಳೆಸಿ ರಕ್ಷಣೆ ಮಾಡುದರಿಂದ ಪರಿಸರ ಮತ್ತು ಆರೋಗ್ಯ ಉತ್ತಮವಾಗಲು ಸಾಧ್ಯ ಎಂದರು.ವೈದ್ಯಕೀಯ ಪ್ರಕೋಷ್ಟದ ಜಿಲ್ಲಾ ಸಹ ಸಂಚಾಲಕ ಡಾ. ರಾಮಚಂದ್ರ ಕಾಮತ್ ಪರಿಸರದ ಕುರಿತು ಮತ್ತು ಮುಂದಿನ ಯೋಜನೆ ಕುರಿತು ಮಾತನಾಡಿದರು.

ಸೆಲ್ಕೋ ಸೋಲಾರ್ ಎಜಿಎಂ ಜಗದೀಶ್ ಪೈ,ಡಾ.ವಿದ್ಯಾಧರ ಶೆಟ್ಟಿ, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ, ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು, ಬಿವಿಟಿ ಕಾರ್ಯನಿರ್ವಾಹಕ ಮನೋಹರ್ ಕಟ್ಗೇರಿ, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply