ಉಡುಪಿ :- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಗತಿ ನಗರ ಅಲೆವೂರಿನಲ್ಲಿ ಪರಿಸರ ಕಾಳಜಿ ದೃಷ್ಟಿಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಣ್ಣಿನ ಮತ್ತು ಔಷಧೀಯ ಸಸ್ಯಗಳನ್ನು ನೆಡಲಾಯಿತು.
ಇಂದು ನಡೆದ ಕಾರ್ಯಕ್ರಮದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಚಾಲನೆ ನೀಡಿದರು.
ಗಿಡಗಳ ಪ್ರಾಯೋಜಕ, ಜಯಂಟ್ಸ್ ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು, ವಿಶ್ವ ಸಂಸ್ಕೃತಿ ಪ್ರತಿಷ್ಟಾನದ ಸಂಚಾಲಕ ರವಿರಾಜ್ ಹೆಚ್.ಪಿ , ಸುವರ್ಣ ಎಂಟರ್ ಪ್ರೈಸಸ್ ಮುಖ್ಯಸ್ಥೆ ಸುನೀತಾ ಮಧುಸೂಧನ್, ಸ್ವಚ್ಚ ಭಾರತ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು,ಕರ್ವಾಲು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.