ವರುಣ್ ಪೈಪಿಂಗ್ ಸಿಸ್ಟಮ್ಸ್ ಮಣಿಪಾಲ ವತಿಯಿಂದ ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ ರೂ. 5 ಲಕ್ಷ

ವರುಣ್ ಪೈಪಿಂಗ್ ಸಿಸ್ಟಮ್ಸ್ ಮಣಿಪಾಲ ಇವರು ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ ನೀಡಿದ ರೂ. 5 ಲಕ್ಷ ದೇಣಿಗೆ ಚೆಕ್ ಶಾಸಕರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಯವರಿಗೆ ಹಸ್ತಾಂತರ

ವರುಣ್ ಪೈಪಿಂಗ್ ಸಿಸ್ಟಮ್ಸ್ ಮಣಿಪಾಲ ಇವರು ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆಯಾಗಿ ರೂ. 5 ಲಕ್ಷ ಮೊತ್ತದ ಚೆಕ್ಕನ್ನು ಶಾಸಕ ಕೆ. ರಘುಪತಿ ಭಟ್ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಿದರು.

ಈ ಮಹತ್ತರ ಕೊಡುಗೆಗೆ ಶಾಸಕ ಕೆ. ರಘುಪತಿ ಭಟ್ ರವರು ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ವರುಣ್ ಪೈಪಿಂಗ್ ಸಿಸ್ಟಮ್ಸ್ ಮಣಿಪಾಲದ ಪಾಲುದಾರರಾದ ಎಂ. ವಿಶ್ವನಾಥ್ ಭಟ್, ವಲ್ಲಭ ಭಟ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply