ಹಲ್ಲಿಲ್ಲದ ಗೋಹತ್ಯಾ ನಿಷೇಧ ಕಾನೂನು ತೆಗೆದು ಬಿಸಾಕಿ~ವಾಸುದೇವ ಭಟ್ ಪೆರಂಪಳ್ಳಿ

ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನೇನೋ ಜಾರಿಗೆ ಬಂತು . ಆದ್ರೆ ಕರಾವಳಿ ಸಹಿತ ರಾಜ್ಯದ ವಿವಿಧೆಡೆಗಳಲ್ಲಿ ನಿರಂತರವಾಗಿ ಗೋವುಗಳ ಮೇಲೆ ಆಕ್ರಮಣ , ಅಕ್ರಮ ಸಾಗಾಟ ಗೋಹತ್ಯೆಗಳು ನಡೆಯುತ್ತಿವೆ . ಹೀಗಿರುವಾಗ ಹಲ್ಲಿಲ್ಲದ ಕಾನೂನನಿಂದ ಪ್ರಯೋಜನವಾದರೂ ಏನು ?? ಆ ಕಾನೂನು ತೆಗೆದು ಬಿಸಾಡುವುದೇ ಲೇಸು ಎಂದು ಹಿಂದೂ ಮುಖಂಡ ಸಾಮಾಜಿಕ ಕಾರ್ಯಕರ್ತ ವಾಸುದೇವ ಭಟ್ ಪೆರಂಪಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ಉಡುಪಿ ಮಂಗಳೂರು ಜಿಲ್ಲೆಗಳಲ್ಲಂತೂ ಗೋವುಗಳ ಸ್ವಚ್ಛಂದ ಬದುಕಿಗೆ ಬೆಂಕಿ ಬೀಳುತ್ತಿದೆ .‌ ದೇವಸ್ಥಾನಗಳ ಅಂಗಣ , ಮನೆಗಳ ಹಟ್ಟಿಗಳಿಗೆ ಹಾಗೂ ಅಲ್ಲಲ್ಲಿ ಬೀದಿಗಳಲ್ಲಿ ಅನಾಥ ಬದುಕು ಸಾಗಿಸುತ್ತಿರುವ ಗೋವುಗಳ ಮೇಲೆ ದುರುಳರ ಅಟ್ಟಹಾಸ ಮುಂದುವರೆದಿದೆ ಎಂದಾದರೆ ಕಾನೂನು ಯಾರಿಗಾಗಿ ಎಂದು ಭಟ್ ಪ್ರಶ್ನಿಸಿದ್ದಾರೆ .

ಪರಿಸ್ಥಿತಿ ಹೀಗೇ ಮುಂದುವರೆದರೆ ಖಂಡಿತವಾಗಿ ಆಗಬಾರದ್ದು ಆಗಿಯೇ ತೀರುತ್ತದೆ . ಹಿಂದೂ ಸಂಘಟನೆಗಳು ಮತ್ತು ಹಿಂದೂ  ಸಮಾಜವೇ  ಕಾನೂನು ಮಾಡಬೇಕಾದ ಕೆಲಸ ಮಾಡ ಬೇಕಾದೀತು ಎಚ್ಚರ .‌

ನಂತರ ಆಗಬಹುದಾದ ಅನರ್ಥಗಳಿಗೆ ಸರ್ಕಾರ ಜಿಲ್ಲಾಡಳಿತಗಳೇ ಹೊಣೆಯಾಗಬೇಕು . ಗೋವುಗಳಿಗೆ ನೆಮ್ಮದಿಯ ಬದುಕು ಈ ನೆಲದಲ್ಲಿ ಸಾಧ್ಯವಿಲ್ಲ ವೆಂದಾದರೆ ತೀರಾ ನಾಚಿಕೆಗೇಡು . ಇಂಥಹ ಧರ್ಮ ದ್ರೋಹದ ಪಾಪವನ್ನು ಇಡೀ ಸಮಾಜ ಹೊರಬೇಕು ಎಂದು ಭಟ್ ವಿಷಾದಿಸಿದ್ದಾರೆ .

 
 
 
 
 
 
 
 
 
 
 

Leave a Reply