ವಿದ್ಯಾಪೋಷಕ್‌ನ ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಿಬಿರ

ಅಂಬಲಪಾಡಿ ದೇವಳದ ಶ್ರೀ ಭವಾನಿ ಮಂಟಪದಲ್ಲಿ ವಿದ್ಯಾಪೋಷಕ್‌ನ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಸಮಾಲೋಚನ ಶಿಬಿರ ಜರಗಿತು. ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು. ವಿದ್ಯಾಪೋಷಕ್ ಫಲಾನುಭಾವಿ ವಿದ್ಯಾರ್ಥಿನಿ, ಪೂರ್ಣಪ್ರಜ್ಞಾ ಕಾಲೇಜಿನ ಉಪನ್ಯಾಸಕಿಯೂ ಆದ ಸುಪರ್ಣಾ ವಿದ್ಯಾಪೋಷಕ್ ಸಹಕಾರದಿಂದ ತಾನು ಮಾಡಿದ ಸಾಧನೆಯನ್ನು ಹಂಚಿಕೊoಡಳು. ಸಿಎ ಮಾಡುತ್ತಿರುವ ವಿದ್ಯಾಪೋಷಕ್ ವಿದ್ಯಾರ್ಥಿನಿ ಕವನಾ ಸಿಎ ಕಲಿಕೆಯ ಕುರಿತು ತನ್ನ ಅನುಭವವನ್ನು ಹಂಚಿಕೊAಡಳು. ಈ ಸಂದರ್ಭದಲ್ಲಿ ಉದ್ಯಮಿ ರವಿ ಭಟ್ ದಂಪತಿಯನ್ನು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಶಾಲು, ಸ್ಮರಣಿಕೆಯೊಂದಿಗೆ ಗೌರವಿಸಿದರು. ಹುಬ್ಬಳ್ಳಿಯ ಮೈಲೈಫ್‌ನ ಸ್ಥಾಪಕ ಪ್ರವೀಣ್ ಗುಡಿ, ಸಿಎ ಪ್ರದೀಪ್ ಜೋಗಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ದಾನಿಗಳಾದ ವಿಲಾಸಿನಿ ಬಿ. ಶೆಣೈ, ಪ್ರಮೀಳ ಐತಾಳ್, ತಾರಾದೇವಿ, ಉಪಾಧ್ಯಕ್ಷರಾದ ಎಸ್. ವಿ. ಭಟ್, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ, ಸದಸ್ಯರಾದ ಸಂತೋಷ್ ಕುಮಾರ್ ಶೆಟ್ಟಿ, ರಾಜೀವಿ, ಗಣೇಶ್ ರಾವ್ ಎಲ್ಲೂರು, ಅಶೋಕ್, ಮಂಜುನಾಥ ಉಪಸ್ಥಿತರಿದ್ದರು. ಈ ಶಿಬಿರದಲ್ಲಿ 230 ವಿದ್ಯಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

 
 
 
 
 
 
 
 
 
 
 

Leave a Reply