ವಿದ್ಯೋದಯ ಪದವಿ ಪೂರ್ವ ಕಾಲೇಜು, ಉಡುಪಿ : ಪ್ರಥಮ ಪಿಯುಸಿ ಪ್ರಾರಂಭೋತ್ಸವ

ಉಡುಪಿ: ನಿರಂತರ ಸಾಧನೆಯನ್ನೇ ಧ್ಯೇಯವನ್ನಾಗಿಸಿಕೊಂಡು ಯಶಸ್ವಿಯಾಗಿ ಮುನ್ನೆಡೆಯುತ್ತಿರುವ ಶೇಕಡಾ 100ರ ಫಲಿತಾಂಶದೊoದಿಗೆ ಸಾಂಸ್ಕೃತಿಕ-ಕ್ರೀಡಾ ಕ್ಷೇತ್ರಗಳಲ್ಲೂ ರಾಜ್ಯ-ರಾಷ್ಟ್ರ ಮಟ್ಟಗಳಲ್ಲಿ ಗುರುತಿಸಲ್ಪಡುತ್ತಿರುವ ಕರ್ನಾಟಕದ ಪ್ರತಿಷ್ಠಿತ ವಿದ್ಯಾಸಂಸ್ಥೆ ಉಡುಪಿಯ ವಿದ್ಯೋದಯ ಟ್ರಸ್ಟ್ನ ಅಂಗ ಸಂಸ್ಥೆ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿಯ ಪ್ರಾರಂಭೋತ್ಸವವು 13 ಮೇ 2022 ರಂದು ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ, ಪ್ರಾಂಶುಪಾಲರು, ರಾಮಕೃಷ್ಣ ಕಾಲೇಜು, ಮಂಗಳೂರು ಇವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮೇಲಿನಂತೆ ಹಿತವಚನ ನುಡಿಯುತ್ತಾ ಸಾಧನೆಯನ್ನೇ ಜೀವಾಳವನ್ನಾಗಿಸಿಕೊಳ್ಳಲು ಇವತ್ತಿನ ವಿದ್ಯಾರ್ಥಿ ಸಮೂಹಕ್ಕೆ ಅವಶ್ಯವೆನಿಸಿದ ಛಲ, ಸ್ಥಿರತೆ, ಏಕಾಗ್ರತೆ ಮತ್ತು ಸಮತೋಲನದ ಬದುಕನ್ನು ಕಂಡುಕೊಳ್ಳುವ ಬಗೆಯನ್ನು ವಿವರಿಸಿದರು.

ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೆ. ಗಣೇಶ್ ರಾವ್ ಅವರು ಈ ಸಮಾರಂಭದ ಅಧ್ಯಕ್ಷರಾಗಿದ್ದು ಶಿಸ್ತು-ಸಂಯಮ-ಸoಸ್ಕಾರಗಳು ವಿದ್ಯಾರ್ಥಿಯ ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುವ ಬಗ್ಗೆ ತಿಳಿಸಿದರು.

ಸಂಸ್ಥೆಯ ಈ ಹಿಂದಿನ ವಿದ್ಯಾರ್ಥಿಗಳ ಸಾಧನೆಗಳ ಬಗ್ಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂದೀಪ್ ಕುಮಾರ್ ಮೆಚ್ಚುಗೆಯ ಮಾತುಗಳನ್ನಾಡಿ ಈ ಸಾಲಿನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದ ಈ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಶ್ರೀಮತಿ ರಂಜನಾ ಕೆ. ಸ್ವಾಗತಿಸಿ, ಸಂಸ್ಕoತ ಉಪನ್ಯಾಸಕ ಶಿವಪ್ರಸಾದ ಭಟ್ ವಂದಿಸಿ; ಹಿಂದಿ ಉಪನ್ಯಾಸಕಿ ಶ್ರೀಮತಿ ವಿಜಯಲಕ್ಷ್ಮೀ ನಿರ್ವಹಿಸಿದರು.

 
 
 
 
 
 
 
 
 
 
 

Leave a Reply