ಮಲ್ಪೆ ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ಗೆ ಕೆನರಾ ಬ್ಯಾಂಕಿನ ವಿವಿಧ ರಾಜ್ಯಗಳ ಅಧಿಕಾರಿಗಳ ಭೇಟಿ

ಬ್ರಹ್ಮಾವರದ ರುಡ್ಸೆಟ್ ಸಂಸ್ಥೆ ಸಹಕಾರದೊಂದಿಗೆ 82 ಜನ ಕೆನರಾ ಬ್ಯಾಂಕ್ ಅಧಿಕಾರಿಗಳು ಮಲ್ಪೆ ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ಗೆ ಭೇಟಿ ನೀಡಿದರು. 
ರುಡ್ಸೆಟ್ ಸಂಸ್ಥೆ ಯಿಂದ ತರಬೇತಿ ಪಡೆದು ಯಶಸ್ವಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ಗೆ  ಕೆನರಾ ಬ್ಯಾಂಕ್ ನ ವಿವಿಧ ರಾಜ್ಯಗಳ ಅಧಿಕಾರಿಗಳು ಭೇಟಿ ನೀಡಿ ಪ್ರಿಂಟರ್ಸ್ ನ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. 
ಮುಂದಿನ ದಿನಗಳಲ್ಲಿ ಸಂಸ್ಥೆ ಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ನ ಆಡಳಿತವರ್ಗದ ಮಾರ್ಗದರ್ಶನ ಅಗತ್ಯ ಎಂಬ ಮಾತನ್ನು ತಿಳಿಸಿದರು.  ಸಂಸ್ಥೆಯ ಮಾಲಕ ಎಮ್ ಮಹೇಶ್ ಕುಮಾರ್ ರವರಿಗೆ ಕೆನರಾ ಬ್ಯಾಂಕ್ ವತಿಯಿಂದ ಗೌರವ ಸ್ಮರಣಿಕೆ ನೀಡಿ ಗೌರವಿಸಲಾಯಿತು. 
 ಕೆನರಾ ಬ್ಯಾಂಕ್ ನ ಉನ್ನತ ಅಧಿಕಾರಿಗಳು ಹಾಗೂ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದ ಉಪನ್ಯಾಸಕ ಸಂತೋಷ್ ಶೆಟ್ಟಿ ಹಾಗೂ ಸಹಾಯಕ ಪ್ರಥ್ವಿ ರಾಜ್. ಹಾಗು ಪ್ರಿಂಟರ್ಸ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply