ಬಾಹ್ಯ ಸ್ವಚ್ಚತೆಯೊಂದಿಗೆ ಆಂತರ್ಯದ ಸ್ವಚ್ಚತೆಯೂ ಅಗತ್ಯ : ವಿಜಯ್ ಕೊಡವೂರು

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗರಡಿಮಜಲು ಇಲ್ಲಿ ನಡೆಯಲಿದ್ದು ಉಡುಪಿ ನಗರ ಸಭಾ ಸದಸ್ಯರಾದ ಶ್ರಿ ವಿಜಯ್ ಕೊಡವೂರು ಇವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ – “ಬಾಹ್ಯ ಸ್ವಚ್ಚತೆ ಎಷ್ಟು ಪ್ರಾಮುಖ್ಯವೋ ಅಷ್ಟೇ ಆಂತರ್ಯದ ಸ್ವಚ್ಚತೆಯೂ ಪ್ರಾಮುಖ್ಯವಾಗಿದೆ. ವಿದ್ಯೆಯೊಂದಿಗೆ ಮಾನವೀಯ ಸಂಬAಧಗಳು, ಸಂಸ್ಕಾರವು ಬೆರೆತರೆ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ. ವಿದ್ಯಾರ್ಥಿಗಳಾದ ನೀವು ಈಗಿನಿಂದಲೇ ಸಮಾಜಕ್ಕೆ ಉಪಯುಕ್ತವಾಗುವ ಸಣ್ಣ ಸಣ್ಣ ಕಾರ್ಯಗಳನ್ನು ಮಾಡಬೇಕು. ಆ ಮೂಲಕ ಸಮಾಜದ ಉತ್ತಮ ಆಸ್ತಿಯಾಗಬೇಕು” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ತೆಂಕನಿಡಿಯೂರು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಾಯತ್ರಿ, ಕಾಲೇಜು ಅಭಿವೃದ್ಧಿ ಸಮಿತಿಯ ಕೋಶಾಧಿಕಾರಿ ಶ್ರೀ ದಯಾನಂದ ಶೆಟ್ಟಿ ಕೊಜಕುಳಿ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗರಡಿಮಜಲು ಇಲ್ಲಿನ ದೈಹಿಕ ಶಿಕ್ಷಕಿ ಶ್ರೀಮತಿ ರತಿ, ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ, ರಾಷ್ಟಿçÃಯ ಸೇವಾ ಯೋಜನಾಧಿಕಾರಿಗಳಾದ ಶ್ರೀಮತಿ ಸುಷ್ಮಾ ಟಿ ಹಾಗೂ ಡಾ. ಮಹೇಶ್ ಕುಮಾರ್ ಕೆ.ಇ. ಉಪಸ್ಥಿತರಿದ್ದರು. ಶಿಬಿರಾರ್ಥಿ ಮನೀಷ್ ಸ್ವಾಗತಿಸಿ, ನಾಗಪ್ಪ ವಂದಿಸಿದರು. ಶಿಬಿರದ ವಿದ್ಯಾರ್ಥಿ ನಾಯಕಿ ಸುಷ್ಮಾ ನಿರೂಪಿಸಿದರು. ಏಳು ದಿನಗಳ ಕಾಲ ನಡೆಯಲಿರುವ ಶಿಬಿರದಲ್ಲಿ ೧೦೦ ಶಿಬಿರಾರ್ಥಿಗಳು, ಧ್ವಜಾರೋಹಣ, ಚಿಂತನ ಮಂಥನ, ಶ್ರಮದಾನ, ಶೈಕ್ಷಣಿಕ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

 
 
 
 
 
 
 
 
 
 
 

Leave a Reply