ಸಂಧ್ಯಾ ಪೈ ಅವರಿಗೆ “ವಿಶ್ವಪ್ರಭಾ ಪುರಸ್ಕಾರ”

ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2023 ‘ನ್ನು ತರಂಗದ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಾಹಿತಿ ಸಂಧ್ಯಾ ಪೈ ಅವರಿಗೆ ನೀಡ ಲಾಗುವುದು .

ಪ್ರಶಸ್ತಿಯು ಪ್ರಶಸ್ತಿ ಪತ್ರ , ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ. ಇದೇ ಮುಂಬರುವ ಜನವರಿ ತಿಂಗಳಲ್ಲಿ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ಪ್ರಯುಕ್ತ ಕಾರ್ಕಳ ಯಕ್ಷ ರಂಗಾಯಣದ ಕಲಾವಿದರಿಂದ ಶಶಿರಾಜ್ ರಾವ್ ಕಾವೂರ್ ರಚಿಸಿದ ಡಾII ಜೀವನ್ ರಾಮ್ ಸುಳ್ಯ ನಿರ್ದೇಶ ನದ ‘ಪರಶುರಾಮ ‘ ನಾಟಕ ಪ್ರದರ್ಶನಗೊಳ್ಳಲಿದೆ.

ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್  ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸಂಚಾಲಕ ರವಿರಾಜ್ ಹೆಚ್ ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply